<p><strong>ಆನೇಕಲ್: </strong>ಬನ್ನೇರುಘಟ್ಟ ಉದ್ಯಾನದಲ್ಲಿ ಜಿಂಕೆಗಳ ಸರಣಿ ಸಾವು ಮುಂದುವರೆದಿದ್ದು, ಕಳೆದ ನಾಲ್ಕು ದಿನಗಳಿಂದ ನಾಲ್ಕು ಜಿಂಕೆಗಳು ಮೃತಪಟ್ಟಿವೆ. ಇದರೊಂದಿಗೆ ಜಿಂಕೆಗಳ ಸಾವಿನ ಸಂಖ್ಯೆ 23ಕ್ಕೆ ಏರಿಕೆ ಆಗಿದೆ.</p>.<p>ಬೆಂಗಳೂರಿನ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಉದ್ಯಾನದಿಂದ 37 ಚುಕ್ಕೆ ಜಿಂಕೆಗಳನ್ನು ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಆಗಸ್ಟ್ 17ರಂದು ತರಲಾಗಿತ್ತು. ಆಗಸ್ಟ್ 22ರಿಂದ ಸೆಪ್ಟಂಬರ್ 19ರವರೆಗೆ 13 ಜಿಂಕೆ ಮೃತಪಟ್ಟಿದ್ದವು. ಸೆ.21ರ ವೇಳೆಗೆ ಆ ಸಂಖ್ಯೆ 19ಕ್ಕೆ ಏರಿಕೆಯಾಗಿತ್ತು.</p>.<p>ಅರಣ್ಯ ಸಚಿವ ಈಶ್ವರ ಖಂಡ್ರೆ ಉದ್ಯಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸೋಂಕಿನಿಂದ ಬಳಲುತ್ತಿರುವ ಜಿಂಕೆಗಳ ಸ್ಥಿತಿಯನ್ನು ಸುಧಾರಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು.</p>.<p>ಪಶುವೈದ್ಯಕೀಯ ಆರೈಕೆಯ ಹೊರತಾಗಿಯೂ ನಾಲ್ಕು ಜಿಂಕೆಗಳು ಮೃತಪಟ್ಟಿವೆ. ನುರಿತ ಪಶುವೈದ್ಯರ ತಂಡವು ಕ್ವಾರೆಂಟೈನ್ನಲ್ಲಿರುವ ಉಳಿದ ಜಿಂಕೆಗಳಿಗೆ ಅಗತ್ಯ ವೈದ್ಯೋಪಚಾರ ಮತ್ತು ಆರೈಕೆ ಮಾಡುತ್ತಿದ್ದಾರೆ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಬನ್ನೇರುಘಟ್ಟ ಉದ್ಯಾನದಲ್ಲಿ ಜಿಂಕೆಗಳ ಸರಣಿ ಸಾವು ಮುಂದುವರೆದಿದ್ದು, ಕಳೆದ ನಾಲ್ಕು ದಿನಗಳಿಂದ ನಾಲ್ಕು ಜಿಂಕೆಗಳು ಮೃತಪಟ್ಟಿವೆ. ಇದರೊಂದಿಗೆ ಜಿಂಕೆಗಳ ಸಾವಿನ ಸಂಖ್ಯೆ 23ಕ್ಕೆ ಏರಿಕೆ ಆಗಿದೆ.</p>.<p>ಬೆಂಗಳೂರಿನ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಉದ್ಯಾನದಿಂದ 37 ಚುಕ್ಕೆ ಜಿಂಕೆಗಳನ್ನು ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಆಗಸ್ಟ್ 17ರಂದು ತರಲಾಗಿತ್ತು. ಆಗಸ್ಟ್ 22ರಿಂದ ಸೆಪ್ಟಂಬರ್ 19ರವರೆಗೆ 13 ಜಿಂಕೆ ಮೃತಪಟ್ಟಿದ್ದವು. ಸೆ.21ರ ವೇಳೆಗೆ ಆ ಸಂಖ್ಯೆ 19ಕ್ಕೆ ಏರಿಕೆಯಾಗಿತ್ತು.</p>.<p>ಅರಣ್ಯ ಸಚಿವ ಈಶ್ವರ ಖಂಡ್ರೆ ಉದ್ಯಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸೋಂಕಿನಿಂದ ಬಳಲುತ್ತಿರುವ ಜಿಂಕೆಗಳ ಸ್ಥಿತಿಯನ್ನು ಸುಧಾರಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು.</p>.<p>ಪಶುವೈದ್ಯಕೀಯ ಆರೈಕೆಯ ಹೊರತಾಗಿಯೂ ನಾಲ್ಕು ಜಿಂಕೆಗಳು ಮೃತಪಟ್ಟಿವೆ. ನುರಿತ ಪಶುವೈದ್ಯರ ತಂಡವು ಕ್ವಾರೆಂಟೈನ್ನಲ್ಲಿರುವ ಉಳಿದ ಜಿಂಕೆಗಳಿಗೆ ಅಗತ್ಯ ವೈದ್ಯೋಪಚಾರ ಮತ್ತು ಆರೈಕೆ ಮಾಡುತ್ತಿದ್ದಾರೆ ಎಂದು ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>