<p><strong>ದೇವನಹಳ್ಳಿ:</strong>ಕೊರೊನಾ ಸಂಕಷ್ಟದ ಸಮಯದಲ್ಲಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ಶಿಶುವಿಹಾರ, ಎಲ್.ಕೆ.ಜಿ, ಯುಕೆಜಿ, 1ನೇ ತರಗತಿ ಮಕ್ಕಳಿಗೆ ಈ ಶೈಕ್ಷಣಿಕ ವರ್ಷದಲ್ಲಿ ಉಚಿತವಾಗಿ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ ಎಂದು ಸ್ಟರ್ಲಿಂಗ್ ಶಾಲೆ ಮುಖ್ಯಸ್ಥ ಸಿದ್ದೇಶ್ವರ್ ಹೇಳಿದರು.</p>.<p>ಪಟ್ಟಣದ ಸ್ಟರ್ಲಿಂಗ್ ಶಾಲೆಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣದಿಂದ ಮಾತ್ರವೇ ದೇಶ ಪ್ರಗತಿಯಾಗಲು ಸಾಧ್ಯ. ಎರಡು ಶೈಕ್ಷಣಿಕ ಅವಧಿಗಳಲ್ಲಿ ಕಾಡಿದ ಕೊರೊನಾದಿಂದಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುಂಠಿತವಾಗುತ್ತಿದೆ ಎಂದರು.</p>.<p>ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಕುಗ್ಗುತ್ತಿದೆ. ನಾಗರಿಕರು ಆರ್ಥಿಕವಾಗಿ ಸಾಕಷ್ಟು ಸಮಸ್ಯೆ ಎದುರಿಸುತ್ತಿರುವ ಕಾರಣದಿಂದ ಈ ವರ್ಷದಲ್ಲಿ ಉಚಿತವಾಗಿ ಶಿಕ್ಷಣ ನೀಡಲು ನಿರ್ಧರಿಸಿದ್ದೇವೆ. ಪ್ರಸ್ತುತ ಆನ್ಲೈನ್ ತರಗತಿಗಳು ನಡೆಯುತ್ತಿವೆ. ಸರ್ಕಾರ ಆಫ್ಲೈನ್ ತರಗತಿಗಳು ನಡೆಸಲಿಕ್ಕೆ ಅನುಮತಿ ನೀಡಿದರೆ ಶಾಲೆಯಲ್ಲೇ ಉಚಿತವಾಗಿ ಪಠ್ಯಪುಸ್ತಕ ವಿತರಿಸಿ ಶಿಕ್ಷಣ ನೀಡಲಾಗುತ್ತದೆ ಎಂದು ಹೇಳಿದರು.</p>.<p>ಪುರಸಭಾ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿ, ಶಾಲೆಗಳು ಆರಂಭ ಮಾಡುವುದು ಸುಲಭ. ಆದರೆ, ಅದನ್ನು ನಿರ್ವಹಣೆ ಮಾಡುವುದು ಈಗಿನ ಪರಿಸ್ಥಿತಿಯಲ್ಲಿ ತುಂಬಾ ಕಷ್ಟಕರ ಎಂದರು.</p>.<p>ಮುಖ್ಯಶಿಕ್ಷಕ ಮುನೇಗೌಡ ಮಾತನಾಡಿ, ಪೋಷಕರಿಗೆ ಹೊರೆಯಾಗದಂತೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗದಂತೆ ಮಾಡಲು ಅನೇಕ ಶಿಕ್ಷಣ ಸಂಸ್ಥೆಗಳು ಶೇ 30ರಷ್ಟು ರಿಯಾಯಿತಿ ನೀಡಿವೆ. ನಮ್ಮ ಸಂಸ್ಥೆಯಿಂದ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.</p>.<p>ಸಂಸ್ಥೆಯ ಮುಖ್ಯಸ್ಥೆ ರಂಜಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong>ಕೊರೊನಾ ಸಂಕಷ್ಟದ ಸಮಯದಲ್ಲಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ಶಿಶುವಿಹಾರ, ಎಲ್.ಕೆ.ಜಿ, ಯುಕೆಜಿ, 1ನೇ ತರಗತಿ ಮಕ್ಕಳಿಗೆ ಈ ಶೈಕ್ಷಣಿಕ ವರ್ಷದಲ್ಲಿ ಉಚಿತವಾಗಿ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ ಎಂದು ಸ್ಟರ್ಲಿಂಗ್ ಶಾಲೆ ಮುಖ್ಯಸ್ಥ ಸಿದ್ದೇಶ್ವರ್ ಹೇಳಿದರು.</p>.<p>ಪಟ್ಟಣದ ಸ್ಟರ್ಲಿಂಗ್ ಶಾಲೆಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣದಿಂದ ಮಾತ್ರವೇ ದೇಶ ಪ್ರಗತಿಯಾಗಲು ಸಾಧ್ಯ. ಎರಡು ಶೈಕ್ಷಣಿಕ ಅವಧಿಗಳಲ್ಲಿ ಕಾಡಿದ ಕೊರೊನಾದಿಂದಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುಂಠಿತವಾಗುತ್ತಿದೆ ಎಂದರು.</p>.<p>ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಕುಗ್ಗುತ್ತಿದೆ. ನಾಗರಿಕರು ಆರ್ಥಿಕವಾಗಿ ಸಾಕಷ್ಟು ಸಮಸ್ಯೆ ಎದುರಿಸುತ್ತಿರುವ ಕಾರಣದಿಂದ ಈ ವರ್ಷದಲ್ಲಿ ಉಚಿತವಾಗಿ ಶಿಕ್ಷಣ ನೀಡಲು ನಿರ್ಧರಿಸಿದ್ದೇವೆ. ಪ್ರಸ್ತುತ ಆನ್ಲೈನ್ ತರಗತಿಗಳು ನಡೆಯುತ್ತಿವೆ. ಸರ್ಕಾರ ಆಫ್ಲೈನ್ ತರಗತಿಗಳು ನಡೆಸಲಿಕ್ಕೆ ಅನುಮತಿ ನೀಡಿದರೆ ಶಾಲೆಯಲ್ಲೇ ಉಚಿತವಾಗಿ ಪಠ್ಯಪುಸ್ತಕ ವಿತರಿಸಿ ಶಿಕ್ಷಣ ನೀಡಲಾಗುತ್ತದೆ ಎಂದು ಹೇಳಿದರು.</p>.<p>ಪುರಸಭಾ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿ, ಶಾಲೆಗಳು ಆರಂಭ ಮಾಡುವುದು ಸುಲಭ. ಆದರೆ, ಅದನ್ನು ನಿರ್ವಹಣೆ ಮಾಡುವುದು ಈಗಿನ ಪರಿಸ್ಥಿತಿಯಲ್ಲಿ ತುಂಬಾ ಕಷ್ಟಕರ ಎಂದರು.</p>.<p>ಮುಖ್ಯಶಿಕ್ಷಕ ಮುನೇಗೌಡ ಮಾತನಾಡಿ, ಪೋಷಕರಿಗೆ ಹೊರೆಯಾಗದಂತೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅಡ್ಡಿಯಾಗದಂತೆ ಮಾಡಲು ಅನೇಕ ಶಿಕ್ಷಣ ಸಂಸ್ಥೆಗಳು ಶೇ 30ರಷ್ಟು ರಿಯಾಯಿತಿ ನೀಡಿವೆ. ನಮ್ಮ ಸಂಸ್ಥೆಯಿಂದ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.</p>.<p>ಸಂಸ್ಥೆಯ ಮುಖ್ಯಸ್ಥೆ ರಂಜಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>