ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಹಾಗೂ ಒಂದು ತಾಲ್ಲೂಕಿನಿಂದ ಮತ್ತೊಂದು ತಾಲ್ಲೂಕಿಗೆ ಜೀವನ ನಿರ್ವಹಣೆಗಾಗಿ ಹೋಗಿರುವವರನ್ನು ವಲಸೆ ಕಾರ್ಮಿಕರು ಎಂಬುದಾಗಿ ಪರಿಗಣಿಸಲಾಗಿದೆ. ಅವರು ಹಾಲಿ ನೆಲೆಸಿರುವ ಸ್ಥಳದಲ್ಲಿ ಸ್ವಂತ ಮನೆ ಹೊಂದಿರಬಾರದು ಹಾಗೂ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು. ಫಲಾನುಭವಿಯು ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದುಕೊಂಡಲ್ಲಿ, ದಂಡ ಅಥವಾ ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆಎಂದು ಅವರು ತಿಳಿಸಿದ್ದಾರೆ.