<p><strong>ಆನೇಕಲ್: </strong>ಬೊಮ್ಮಸಂದ್ರ ಕೈಗಾರಿಕಾ ಸಂಘದ ಐದು ಸಾವಿರ ಕಾರ್ಮಿಕರಿಗೆ ಉಚಿತವಾಗಿ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಕಾರ್ಮಿಕರು ಕೈಗಾರಿಕೆಗಳ ಆಸ್ತಿ. ಹಾಗಾಗಿ ಅವರ ಆರೋಗ್ಯದ ರಕ್ಷಣೆ ಮಾಡುವುದು ನಮ್ಮ ಬದ್ಧತೆಯಾಗಿದೆ ಎಂದು ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷ ಎ. ಪ್ರಸಾದ್ ತಿಳಿಸಿದರು.</p>.<p>ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಕಾರ್ಮಿಕರಿಗೆ ಉಚಿತವಾಗಿ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಂಘದಿಂದ ನಾರಾಯಣ ಹೃದಯಾಲಯದ ಮೂಲಕ ಐದು ಸಾವಿರ ಮಂದಿ ಕಾರ್ಮಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಲಸಿಕೆ ವೆಚ್ಚವನ್ನು ಆಯಾ ಕಾರ್ಖಾನೆಗಳು ಭರಿಸಲಿವೆ. ಹಾಗಾಗಿ, ಕಾಯಂ ಕೇಂದ್ರವನ್ನು ಸಂಘದ ಕಚೇರಿಯಲ್ಲಿ<br />ಪ್ರಾರಂಭಿಸಲಾಗಿದೆ ಎಂದು<br />ತಿಳಿಸಿದರು.</p>.<p>ಸಂಘವು ಕೊರೊನಾ ಸಂದರ್ಭದಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಮಾನವೀಯ ಸೇವೆಯಲ್ಲಿ ತೊಡಗಿಕೊಂಡಿದೆ. ಎರಡು ಸಾವಿರ ಆರೋಗ್ಯ ಕಿಟ್ಗಳನ್ನು ಸೋಂಕಿತರಿಗೆ ನೀಡಲಾಗಿದೆ. ಸಂಘದ ಮೂಲಕ 330 ಆಮ್ಲಜನಕ ಕಾನ್ಸನ್ಟ್ರೇಟರ್ಗಳು ಮತ್ತು 220 ಬೈಪ್ಯಾಕ್ಗಳನ್ನು ಗ್ರಾಮಾಂತರ ಭಾಗದ ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದರು.</p>.<p>ಅಪೋಟೆಕ್ಸ್ ಕಾರ್ಖಾನೆಯ ನಿರ್ದೇಶಕ ಯೋಗಾಂಜನೇಯ ರೆಡ್ಡಿ, ಬೊಮ್ಮಸಂದ್ರ ಕೈಗಾರಿಕಾ ಸಂಘವು ಕ್ರಿಯಾಶೀಲ ಕಾರ್ಯಕ್ರಮಗಳ ಮೂಲಕ ಕೈಗಾರಿಕಾ ಮಾಲೀಕರ ಮತ್ತು ಕಾರ್ಮಿಕರ ವಿಶ್ವಾಸಕ್ಕೆ ಪಾತ್ರವಾಗಿದೆ. ಕಳೆದ 15 ವರ್ಷಗಳಿಂದ ಸೊರಗಿದ್ದ ಸಂಘವು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಚೈತನ್ಯ ಪಡೆದಿದೆ ಎಂದು ತಿಳಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಸಂಜೀವ್ ಸಾವಂತ್, ನರೇಂದ್ರಕುಮಾರ್, ಮುರಳೀಧರ್, ರಾಜಶೇಖರ ಪಾಟೀಲ್, ವಾಸು,<br />ಮಲ್ಲಿಕಾರ್ಜುನಪ್ಪ, ನೀಲಕಂಠಯ್ಯ, ಸತೀಶ್ ಕುಮಾರ್, ಲಿಯೋ ಕ್ರಿಸ್ಟೋಫರ್, ರಾಜು ಮಡಿಕೇರಿ, ಗೋಪಾಲಸಿಂಗ್, ಕಿರಣ್ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಬೊಮ್ಮಸಂದ್ರ ಕೈಗಾರಿಕಾ ಸಂಘದ ಐದು ಸಾವಿರ ಕಾರ್ಮಿಕರಿಗೆ ಉಚಿತವಾಗಿ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಕಾರ್ಮಿಕರು ಕೈಗಾರಿಕೆಗಳ ಆಸ್ತಿ. ಹಾಗಾಗಿ ಅವರ ಆರೋಗ್ಯದ ರಕ್ಷಣೆ ಮಾಡುವುದು ನಮ್ಮ ಬದ್ಧತೆಯಾಗಿದೆ ಎಂದು ಬೊಮ್ಮಸಂದ್ರ ಕೈಗಾರಿಕಾ ಸಂಘದ ಅಧ್ಯಕ್ಷ ಎ. ಪ್ರಸಾದ್ ತಿಳಿಸಿದರು.</p>.<p>ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಕಾರ್ಮಿಕರಿಗೆ ಉಚಿತವಾಗಿ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಂಘದಿಂದ ನಾರಾಯಣ ಹೃದಯಾಲಯದ ಮೂಲಕ ಐದು ಸಾವಿರ ಮಂದಿ ಕಾರ್ಮಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಲಸಿಕೆ ವೆಚ್ಚವನ್ನು ಆಯಾ ಕಾರ್ಖಾನೆಗಳು ಭರಿಸಲಿವೆ. ಹಾಗಾಗಿ, ಕಾಯಂ ಕೇಂದ್ರವನ್ನು ಸಂಘದ ಕಚೇರಿಯಲ್ಲಿ<br />ಪ್ರಾರಂಭಿಸಲಾಗಿದೆ ಎಂದು<br />ತಿಳಿಸಿದರು.</p>.<p>ಸಂಘವು ಕೊರೊನಾ ಸಂದರ್ಭದಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಮಾನವೀಯ ಸೇವೆಯಲ್ಲಿ ತೊಡಗಿಕೊಂಡಿದೆ. ಎರಡು ಸಾವಿರ ಆರೋಗ್ಯ ಕಿಟ್ಗಳನ್ನು ಸೋಂಕಿತರಿಗೆ ನೀಡಲಾಗಿದೆ. ಸಂಘದ ಮೂಲಕ 330 ಆಮ್ಲಜನಕ ಕಾನ್ಸನ್ಟ್ರೇಟರ್ಗಳು ಮತ್ತು 220 ಬೈಪ್ಯಾಕ್ಗಳನ್ನು ಗ್ರಾಮಾಂತರ ಭಾಗದ ಸರ್ಕಾರಿ ಆಸ್ಪತ್ರೆಗಳಿಗೆ ನೀಡಲಾಗಿದೆ ಎಂದರು.</p>.<p>ಅಪೋಟೆಕ್ಸ್ ಕಾರ್ಖಾನೆಯ ನಿರ್ದೇಶಕ ಯೋಗಾಂಜನೇಯ ರೆಡ್ಡಿ, ಬೊಮ್ಮಸಂದ್ರ ಕೈಗಾರಿಕಾ ಸಂಘವು ಕ್ರಿಯಾಶೀಲ ಕಾರ್ಯಕ್ರಮಗಳ ಮೂಲಕ ಕೈಗಾರಿಕಾ ಮಾಲೀಕರ ಮತ್ತು ಕಾರ್ಮಿಕರ ವಿಶ್ವಾಸಕ್ಕೆ ಪಾತ್ರವಾಗಿದೆ. ಕಳೆದ 15 ವರ್ಷಗಳಿಂದ ಸೊರಗಿದ್ದ ಸಂಘವು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಚೈತನ್ಯ ಪಡೆದಿದೆ ಎಂದು ತಿಳಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಸಂಜೀವ್ ಸಾವಂತ್, ನರೇಂದ್ರಕುಮಾರ್, ಮುರಳೀಧರ್, ರಾಜಶೇಖರ ಪಾಟೀಲ್, ವಾಸು,<br />ಮಲ್ಲಿಕಾರ್ಜುನಪ್ಪ, ನೀಲಕಂಠಯ್ಯ, ಸತೀಶ್ ಕುಮಾರ್, ಲಿಯೋ ಕ್ರಿಸ್ಟೋಫರ್, ರಾಜು ಮಡಿಕೇರಿ, ಗೋಪಾಲಸಿಂಗ್, ಕಿರಣ್ಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>