ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ | ಸ್ವಾತಂತ್ರ‍್ಯ ಹೋರಾಟಗಾರ ಮರಿಯಪ್ಪ ನಿಧನ

Published 27 ಜುಲೈ 2023, 7:05 IST
Last Updated 27 ಜುಲೈ 2023, 7:05 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನ ಕಸಬಾ ಹೋಬಳಿ ಎಚ್.ಕೊತ್ತನೂರು ಗ್ರಾಮದ ಸ್ವಾತಂತ್ರ ಹೋರಾಟಗಾರ ಮೂಲೆಕೇರಿ ಮರಿಯಪ್ಪ (95) ವಯೋಸಹಜ ಕಾಯಿಲೆಯಿಂದ ಬುಧವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಗಾಂಧಿವಾದಿ, ಕನಕಪುರದ ವಿದ್ಯಾದಾನಿ ಎಸ್.ಕರಿಯಪ್ಪ ಅವರ ಅನುಯಾಯಿ ಆಗಿದ್ದ ಇವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು. 1946ರಲ್ಲಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿದ್ದರು. ಮೃತರಿಗೆ ಎರಡು ಗಂಡು, ಒಬ್ಬಳು ಹೆಣ್ಣು ಮಗಳು ಇದ್ದಾರೆ.

ತಹಶೀಲ್ದಾರ್ ಡಾಕ್ಟರ್ ಸ್ಮಿತಾರಾಮ್ ನೇತೃತ್ವದಲ್ಲಿ ಮೃತರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT