ಬಿಜೆಪಿ ಪಕ್ಷದಲ್ಲಿ ಅಂತರಿಕವಾಗಿ ಬಹಳಷ್ಟು ಗೊಂದಲಗಳಿವೆ. ಸಚಿವ ಸಂಪುಟ ವಿಸ್ತರಣೆಯಾಗುವ ತನಕ ಸಮಸ್ಯೆಗಳು ಬಗೆಹರಿಯುವುದಿಲ್ಲ. ಜಿಲ್ಲೆಯಲ್ಲಿ ಹೊಸಕೋಟೆ ಸೇರಿದಂತೆ ಎಲ್ಲ ತಾಲ್ಲೂಕುಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಇದೆ. ಜಿಲ್ಲಾಧಿಕಾರಿ ಅವರೊಂದಿಗೆ ವಿವರವಾದ ಚರ್ಚೆ ನಡೆದಿದೆ. ದೇವನಹಳ್ಳಿ, ಹೊಸಕೋಟೆ ತಾಲ್ಲೂಕುಗಳಿಗೆ ಶೀಘ್ರದಲ್ಲೇ ನೀರು ತರುವ ಪ್ರಯತ್ನ ನಡೆಯಲಿದೆ. ನೆಲಮಂಗಲ ಮತ್ತು ದೊಡ್ಡಬಳ್ಳಾಪುರಕ್ಕೂ ಸರಿದೂಗಿಸುವ ಪ್ರಯತ್ನವಿದೆ ಎಂದು ಹೇಳಿದರು.