‘ಪ್ರತಿವರ್ಷ ಇಷ್ಟೊತ್ತಿಗೆ ಹೆಚ್ಚು ಬೇಡಿಕೆ ಬರುತ್ತಿತ್ತು. ಮುಂಗಡ ಹಣ ನೀಡಿ ಕಾಯ್ದಿರಿಸುತ್ತಿದ್ದರು. ಈ ಬಾರಿ ಕೊರೊನಾದಿಂದಾಗಿ ಬೇಡಿಕೆ ಬಂದಿಲ್ಲ. ಈ ಬಾರಿ ಹಬ್ಬಗಳ ಆಚರಣೆಗೆ ಅವಕಾಶ ಕೊಡ್ತಾರೋ ಇಲ್ಲವೋ ಎಂದು ಜನರು ಹಿಂದೇಟು ಹಾಕುತ್ತಿದ್ದಾರೆ. ಮೈಸೂರು, ಚಿತ್ತೂರು, ರಾಮನಗರ, ದೊಡ್ಡಬಳ್ಳಾಪುರ, ನಂಜನಗೂಡು ಸೇರಿದಂತೆ ಅನೇಕ ಕಡೆಗಳಿಗೆ ಮೂರ್ತಿಗಳನ್ನು ಖರೀದಿ ಮಾಡಿಕೊಂಡು ಹೋಗುತ್ತಿದ್ದರು. ನಾವೂ ಕೂಡಾ ಮೂರ್ತಿಗಳಿಗೆ ಬಣ್ಣ ಹಾಕದೆ ಬಿಟ್ಟಿದ್ದೇವೆ’ ಎಂದು ತಮ್ಮ ಸಂಕಷ್ಟಗಳನ್ನು ಮುಂದಿಟ್ಟರು.