<p><strong>ಹೊಸಕೋಟೆ:</strong> ತಾಲ್ಲೂಕಿನ ಕಸಬಾ ಹೋಬಳಿಯ ಲಾಲ್ಬಾಗ್ ದಾಸರಹಳ್ಳಿಯಲ್ಲಿ ರೈತರ ಮಕ್ಕಳ ರಾಯಲ್ ಬಾಯ್ಸ್ ಗೆಳೆಯರ ಬಳಗದ 9 ನೇ ವರ್ಷದ ಗಣೇಶೋತ್ಸವ ಮತ್ತು ವಿಸರ್ಜನೆ ವಿಜೃಂಭಣೆಯಿಂದ ಜರುಗಿತು.</p>.<p>ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಹಾಯ್ದು ಹೋದ ವಿಸರ್ಜಾನಾ ಮೆರವಣಿಗೆಗೆ ಕೇರಳದ ಸೀಗಾರಿ ಮೇಳ, ತಮಟೆ, ಡೊಳ್ಳುಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾ ತಂಡಗಳು ಮೆರುಗು ನೀಡಿದವು. </p>.<p>ಇದಕ್ಕೂ ಮುನ್ನ ನಡೆದ ಸಮಾರಂಭದಲ್ಲಿ ಮಾತನಾಡಿದ ರೈತ ಮುರುಳಿ, ರೈತರನ್ನು ಕೇವಲ ಹೆಸರಿಗೆ ಮಾತ್ರ ದೇಶದ ಬೆನ್ನೆಲಬು ಎನ್ನುತ್ತಿರುವ ಸರ್ಕಾರಗಳು ರೈತರಿಗೆ ಬೆಂಬಲ ಬೆಲೆ ನೀಡಲು ಮೀನಮೇಷ ಎಣಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಗ್ರಾಮದ ರೈತರ ಮಕ್ಕಳು ಸೇರಿ ಪರಿಸರ ಸ್ನೇಹಿ ಗಣಪ ಮತ್ತು ಗೌರಿಯನ್ನು ಪ್ರತಿಷ್ಠಾಪಿಸಿ ಪ್ರತಿನಿತ್ಯ ಪೂಜೆ, ಪ್ರಸಾದ ವಿನಿಯೋಗ ಮಾಡಿದರು. ಮಕ್ಕಳು ಮತ್ತು ಮಹಿಳೆಯರಿಗೆ ರಂಗೋಲಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. </p>.<p>ಈ ಸಂಧರ್ಭದಲ್ಲಿ ರೈತರ ಮಕ್ಕಳು ರಾಯಲ್ ಬಾಯ್ಸ್ ಗೆಳೆಯರ ಬಳಗದವರು ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ತಾಲ್ಲೂಕಿನ ಕಸಬಾ ಹೋಬಳಿಯ ಲಾಲ್ಬಾಗ್ ದಾಸರಹಳ್ಳಿಯಲ್ಲಿ ರೈತರ ಮಕ್ಕಳ ರಾಯಲ್ ಬಾಯ್ಸ್ ಗೆಳೆಯರ ಬಳಗದ 9 ನೇ ವರ್ಷದ ಗಣೇಶೋತ್ಸವ ಮತ್ತು ವಿಸರ್ಜನೆ ವಿಜೃಂಭಣೆಯಿಂದ ಜರುಗಿತು.</p>.<p>ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಹಾಯ್ದು ಹೋದ ವಿಸರ್ಜಾನಾ ಮೆರವಣಿಗೆಗೆ ಕೇರಳದ ಸೀಗಾರಿ ಮೇಳ, ತಮಟೆ, ಡೊಳ್ಳುಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾ ತಂಡಗಳು ಮೆರುಗು ನೀಡಿದವು. </p>.<p>ಇದಕ್ಕೂ ಮುನ್ನ ನಡೆದ ಸಮಾರಂಭದಲ್ಲಿ ಮಾತನಾಡಿದ ರೈತ ಮುರುಳಿ, ರೈತರನ್ನು ಕೇವಲ ಹೆಸರಿಗೆ ಮಾತ್ರ ದೇಶದ ಬೆನ್ನೆಲಬು ಎನ್ನುತ್ತಿರುವ ಸರ್ಕಾರಗಳು ರೈತರಿಗೆ ಬೆಂಬಲ ಬೆಲೆ ನೀಡಲು ಮೀನಮೇಷ ಎಣಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಗ್ರಾಮದ ರೈತರ ಮಕ್ಕಳು ಸೇರಿ ಪರಿಸರ ಸ್ನೇಹಿ ಗಣಪ ಮತ್ತು ಗೌರಿಯನ್ನು ಪ್ರತಿಷ್ಠಾಪಿಸಿ ಪ್ರತಿನಿತ್ಯ ಪೂಜೆ, ಪ್ರಸಾದ ವಿನಿಯೋಗ ಮಾಡಿದರು. ಮಕ್ಕಳು ಮತ್ತು ಮಹಿಳೆಯರಿಗೆ ರಂಗೋಲಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. </p>.<p>ಈ ಸಂಧರ್ಭದಲ್ಲಿ ರೈತರ ಮಕ್ಕಳು ರಾಯಲ್ ಬಾಯ್ಸ್ ಗೆಳೆಯರ ಬಳಗದವರು ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>