<p><strong>ಆನೇಕಲ್:</strong> ತಾಲ್ಲೂಕಿನ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೆರಟಿಗನಬೆಲೆಯಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಬಿ.ಶಿವಣ್ಣ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ಗಡಿ ಗ್ರಾಮಗಳಾಗಿರುವ ಗೆರಟಿಗನಬೆಲೆಯಲ್ಲಿ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಗಮನ ನೀಡಲಾಗಿದೆ. ಗೆರಟಿಗನಬೆಲೆ-ಮ್ಯಾನಾಗರ ರಸ್ತೆಯನ್ನು ಕಾಂಕ್ರಿಟ್ ರಸ್ತೆಯಾಗಿ ಅಭಿವೃದ್ಧಿ ಪಡಿಸುವುದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ ಎಂದರು.</p>.<p>ತಾಲ್ಲೂಕಿನ ಗೆರಟಿಗನಬೆಲೆಯಲ್ಲಿ 80 ವರ್ಷಗಳ ನಂತರ ಊರ ಹಬ್ಬ ಮಾಡಲಾಗುತ್ತಿದೆ. ಹಾಗಾಗಿ ಮುಖ್ಯ ರಸ್ತೆಯನ್ನು ಅಭಿವೃದ್ಧಿಗೆ ಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದ್ದ, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು. ಮೇ 20ರ ಒಳಗಾಗಿ ಮುಖ್ಯ ರಸ್ತೆಯನ್ನು ಸುಸಜ್ಜಿತ ರಸ್ತೆಯಾಗಿ ರೂಪಿಸಲು ಕ್ರಮ ವಹಿಸಲಾಗುವುದು ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಹಾಗಡೆ ಹರೀಶ್, ಎಂ.ನಾರಾಯಣ್, ಪುಷ್ಪರಾಜು, ಬನಹಳ್ಳಿ ಅಭಿ, ಅಬ್ಬಣ್ಣ, ಕೃಪೇಂದ್ರ, ಮಾದೇಶ್ ಗೌಡ, ಕುಮಾರ್, ಹರೀಶ್ ಗೌಡ, ಸುರೇಶ್ ಗೌಡ, ಶಿವಾನಂದ ಪಾಟೀಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-15-2016304472</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ತಾಲ್ಲೂಕಿನ ಸಮಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೆರಟಿಗನಬೆಲೆಯಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಬಿ.ಶಿವಣ್ಣ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ಗಡಿ ಗ್ರಾಮಗಳಾಗಿರುವ ಗೆರಟಿಗನಬೆಲೆಯಲ್ಲಿ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಗಮನ ನೀಡಲಾಗಿದೆ. ಗೆರಟಿಗನಬೆಲೆ-ಮ್ಯಾನಾಗರ ರಸ್ತೆಯನ್ನು ಕಾಂಕ್ರಿಟ್ ರಸ್ತೆಯಾಗಿ ಅಭಿವೃದ್ಧಿ ಪಡಿಸುವುದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುತ್ತದೆ ಎಂದರು.</p>.<p>ತಾಲ್ಲೂಕಿನ ಗೆರಟಿಗನಬೆಲೆಯಲ್ಲಿ 80 ವರ್ಷಗಳ ನಂತರ ಊರ ಹಬ್ಬ ಮಾಡಲಾಗುತ್ತಿದೆ. ಹಾಗಾಗಿ ಮುಖ್ಯ ರಸ್ತೆಯನ್ನು ಅಭಿವೃದ್ಧಿಗೆ ಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದ್ದ, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು. ಮೇ 20ರ ಒಳಗಾಗಿ ಮುಖ್ಯ ರಸ್ತೆಯನ್ನು ಸುಸಜ್ಜಿತ ರಸ್ತೆಯಾಗಿ ರೂಪಿಸಲು ಕ್ರಮ ವಹಿಸಲಾಗುವುದು ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಹಾಗಡೆ ಹರೀಶ್, ಎಂ.ನಾರಾಯಣ್, ಪುಷ್ಪರಾಜು, ಬನಹಳ್ಳಿ ಅಭಿ, ಅಬ್ಬಣ್ಣ, ಕೃಪೇಂದ್ರ, ಮಾದೇಶ್ ಗೌಡ, ಕುಮಾರ್, ಹರೀಶ್ ಗೌಡ, ಸುರೇಶ್ ಗೌಡ, ಶಿವಾನಂದ ಪಾಟೀಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-15-2016304472</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>