<p><strong>ವಿಜಯಪುರ:</strong> ಯಾವುದೇ ಸಮುದಾಯಗಳು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕಾದರೆ ಸಂಘಟಿತರಾಗಿ ಹೋರಾಟ ಮಾಡುವುದರ ಜೊತೆಗೆ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಂಡಾಗ ಮಾತ್ರವೇ ಸಾಧ್ಯವಾಗುತ್ತದೆ ಎಂದು ಮುಖಂಡ ಗೊಡ್ಲುಮುದ್ದೇನಹಳ್ಳಿ ಮುನಿರಾಜು ಹೇಳಿದರು.</p>.<p>ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಮಹರ್ಷಿ ಮಾತಂಗ ಜನ ಸೇವಾ ಟ್ರಸ್ಟ್ನ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಯಾವುದೇ ಸಮುದಾಯಗಳು ಏಳಿಗೆಯಾಗಬೇಕಾದರೆ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ಸಾಧ್ಯವಿದೆ ಎಂದು ಹೇಳಿರುವ ಬಾಬಾ ಸಾಹೇಬ ಅಂಬೇಡ್ಕರ್ ಅವರು ತಳಸಮುದಾಯಗಳ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಇಂದು ಅನೇಕ ಸಮುದಾಯಗಳು ನಿರಂತರವಾಗಿ ದೌರ್ಜನ್ಯ ಮತ್ತು ದಬ್ಬಾಳಿಕೆ ಸಹಿಸಿಕೊಂಡು ಬರುತ್ತಿದ್ದಾರೆ’ ಎಂದರು.</p>.<p>ಮುಖಂಡ ಭಟ್ರೇನಹಳ್ಳಿ ನಾರಾಯಣಪ್ಪ ಮಾತನಾಡಿ, ‘ಸ್ವಾತಂತ್ರ್ಯ ಪೂರ್ವದಿಂದಲೂ ನಿರಂತರವಾಗಿ ಶೋಷಣೆಗೆ ಒಳಗಾಗುತ್ತಲೇ ಇದ್ದೇವೆ. ಈಗಲೂ ನಾವು ವಂಚನೆಗೆ ಒಳಗಾಗುತ್ತಲೇ ಇದ್ದೇವೆ. ರಾಜಕೀಯವಾಗಿಯೂ ನಮ್ಮ ಸಮುದಾಯಕ್ಕೆ ಸಾಕಷ್ಟು ಅನ್ಯಾಯವಾಗುತ್ತಿದ್ದರೂ ಯಾವುದೇ ಸಮುದಾಯಗಳು ಬೆಂಬಲಕ್ಕೆ ನಿಲ್ಲುತ್ತಿಲ್ಲ’ ಎಂದರು.</p>.<p>ರಾಜ್ಯದಲ್ಲಿ ಆಡಳಿತಕ್ಕೆ ಬರುತ್ತಿರುವ ಸರ್ಕಾರಗಳೂ ಯಾವ ಸಮುದಾಯದ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಾರೋ ಅಂತಹ ಜನಾಂಗಕ್ಕೆ ಮಣೆಹಾಕುತ್ತಿವೆ ಎಂದು ದೂರಿದರು.</p>.<p>ಮುಖಂಡ ವೆಂಕಟಗಿರಿಕೋಟೆ ಚಿನ್ನಪ್ಪ ಮಾತನಾಡಿ, ಸಮಾಜದ ಏಳಿಗೆ ಎಂದರೆ ಮಾನವ ಜನಾಂಗಕ್ಕೆ ಅಗತ್ಯವಾದ ಶಿಕ್ಷಣವೂ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುವುದು. ಅವರು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಏಳಿಗೆಯಾದಾಗ ಮಾತ್ರವೇ ಸಮಾಜದ ಅಭಿವೃದ್ಧಿಯಾಗಿದೆ ಎಂದು ಹೇಳಬಹುದು ಎಂದರು.</p>.<p>‘ಅನುದಾನ ಬಿಡುಗಡೆ ಮಾಡುತ್ತಿದ್ದರೂ ಬೆರಳೆಣಿಕೆಯಷ್ಟು ಮಂದಿಗೆ ಈ ಸೌಲಭ್ಯಗಳು ಸಿಗುತ್ತಿವೆ. ಇಡೀ ಸಮುದಾಯಕ್ಕೆ ಕೊಟ್ಟಿದ್ದೇವೆ ಎನ್ನುವುದು ಜನಾಂಗದ ಏಳಿಗೆಗೆ ಸಂಬಂಧಪಡುತ್ತಿಲ್ಲ. ಆದ್ದರಿಂದ ಟ್ರಸ್ಟ್ನ ಮೂಲಕ ಸಮುದಾಯದ ಏಳಿಗೆಗಾಗಿ ಶ್ರಮಿಸಲು ಪಣತೊಟ್ಟಿದ್ದೇವೆ’ ಎಂದರು.</p>.<p>ಮುಖಂಡರಾದ ತಿರುಮಲೇಶ್, ಶಂಕರಪ್ಪ, ಗಂಗಾಧರ್, ಮುನಿಯಪ್ಪ, ಪಿಳ್ಳಪ್ಪ, ಮುನಿಶಾಮಯ್ಯ, ತಿಮ್ಮಹಳ್ಳಿ ನಾರಾಯಣಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಯಾವುದೇ ಸಮುದಾಯಗಳು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕಾದರೆ ಸಂಘಟಿತರಾಗಿ ಹೋರಾಟ ಮಾಡುವುದರ ಜೊತೆಗೆ ಸಂವಿಧಾನಬದ್ಧ ಹಕ್ಕುಗಳನ್ನು ಪಡೆದುಕೊಂಡಾಗ ಮಾತ್ರವೇ ಸಾಧ್ಯವಾಗುತ್ತದೆ ಎಂದು ಮುಖಂಡ ಗೊಡ್ಲುಮುದ್ದೇನಹಳ್ಳಿ ಮುನಿರಾಜು ಹೇಳಿದರು.</p>.<p>ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಮಹರ್ಷಿ ಮಾತಂಗ ಜನ ಸೇವಾ ಟ್ರಸ್ಟ್ನ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಯಾವುದೇ ಸಮುದಾಯಗಳು ಏಳಿಗೆಯಾಗಬೇಕಾದರೆ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ಸಾಧ್ಯವಿದೆ ಎಂದು ಹೇಳಿರುವ ಬಾಬಾ ಸಾಹೇಬ ಅಂಬೇಡ್ಕರ್ ಅವರು ತಳಸಮುದಾಯಗಳ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಇಂದು ಅನೇಕ ಸಮುದಾಯಗಳು ನಿರಂತರವಾಗಿ ದೌರ್ಜನ್ಯ ಮತ್ತು ದಬ್ಬಾಳಿಕೆ ಸಹಿಸಿಕೊಂಡು ಬರುತ್ತಿದ್ದಾರೆ’ ಎಂದರು.</p>.<p>ಮುಖಂಡ ಭಟ್ರೇನಹಳ್ಳಿ ನಾರಾಯಣಪ್ಪ ಮಾತನಾಡಿ, ‘ಸ್ವಾತಂತ್ರ್ಯ ಪೂರ್ವದಿಂದಲೂ ನಿರಂತರವಾಗಿ ಶೋಷಣೆಗೆ ಒಳಗಾಗುತ್ತಲೇ ಇದ್ದೇವೆ. ಈಗಲೂ ನಾವು ವಂಚನೆಗೆ ಒಳಗಾಗುತ್ತಲೇ ಇದ್ದೇವೆ. ರಾಜಕೀಯವಾಗಿಯೂ ನಮ್ಮ ಸಮುದಾಯಕ್ಕೆ ಸಾಕಷ್ಟು ಅನ್ಯಾಯವಾಗುತ್ತಿದ್ದರೂ ಯಾವುದೇ ಸಮುದಾಯಗಳು ಬೆಂಬಲಕ್ಕೆ ನಿಲ್ಲುತ್ತಿಲ್ಲ’ ಎಂದರು.</p>.<p>ರಾಜ್ಯದಲ್ಲಿ ಆಡಳಿತಕ್ಕೆ ಬರುತ್ತಿರುವ ಸರ್ಕಾರಗಳೂ ಯಾವ ಸಮುದಾಯದ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಾರೋ ಅಂತಹ ಜನಾಂಗಕ್ಕೆ ಮಣೆಹಾಕುತ್ತಿವೆ ಎಂದು ದೂರಿದರು.</p>.<p>ಮುಖಂಡ ವೆಂಕಟಗಿರಿಕೋಟೆ ಚಿನ್ನಪ್ಪ ಮಾತನಾಡಿ, ಸಮಾಜದ ಏಳಿಗೆ ಎಂದರೆ ಮಾನವ ಜನಾಂಗಕ್ಕೆ ಅಗತ್ಯವಾದ ಶಿಕ್ಷಣವೂ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುವುದು. ಅವರು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಏಳಿಗೆಯಾದಾಗ ಮಾತ್ರವೇ ಸಮಾಜದ ಅಭಿವೃದ್ಧಿಯಾಗಿದೆ ಎಂದು ಹೇಳಬಹುದು ಎಂದರು.</p>.<p>‘ಅನುದಾನ ಬಿಡುಗಡೆ ಮಾಡುತ್ತಿದ್ದರೂ ಬೆರಳೆಣಿಕೆಯಷ್ಟು ಮಂದಿಗೆ ಈ ಸೌಲಭ್ಯಗಳು ಸಿಗುತ್ತಿವೆ. ಇಡೀ ಸಮುದಾಯಕ್ಕೆ ಕೊಟ್ಟಿದ್ದೇವೆ ಎನ್ನುವುದು ಜನಾಂಗದ ಏಳಿಗೆಗೆ ಸಂಬಂಧಪಡುತ್ತಿಲ್ಲ. ಆದ್ದರಿಂದ ಟ್ರಸ್ಟ್ನ ಮೂಲಕ ಸಮುದಾಯದ ಏಳಿಗೆಗಾಗಿ ಶ್ರಮಿಸಲು ಪಣತೊಟ್ಟಿದ್ದೇವೆ’ ಎಂದರು.</p>.<p>ಮುಖಂಡರಾದ ತಿರುಮಲೇಶ್, ಶಂಕರಪ್ಪ, ಗಂಗಾಧರ್, ಮುನಿಯಪ್ಪ, ಪಿಳ್ಳಪ್ಪ, ಮುನಿಶಾಮಯ್ಯ, ತಿಮ್ಮಹಳ್ಳಿ ನಾರಾಯಣಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>