<p><strong>ದೊಡ್ಡಬಳ್ಳಾಪುರ</strong>: ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿ ಡಿ. 25ರಂದು ನಡೆಯಲಿರುವ ಸುಬ್ರಹ್ಮಣ್ಯ ರಥೋತ್ಸವ ಸಿದ್ಧತೆ ಭರದಿಂದ ನಡೆದಿದೆ.</p>.<p>ರಥೋತ್ಸವದಂದು ಪ್ರತಃಕಾಲ 2 ಗಂಟೆಗೆ ದೇವಾಲಯ ತೆರೆಯಲಾಗುತ್ತದೆ. 2.30ಕ್ಕೆ ಅಭಿಷೇಕ ಪ್ರಾರಂಭವಾಗಿ ಬೆಳಿಗ್ಗೆ 4.30ಕ್ಕೆ ಮಂಗಳಾರತಿ ನಡೆಯಲಿದೆ.<br> ಬೆಳಗೆ 5 ರಿಂದ 6 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 6 ಗಂಟೆಯಿಂದ ಭಕ್ತಾದಿಗಳಿಗಾಗಿ ಧರ್ಮದರ್ಶನ ಮತ್ತು ₹50ರ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<p>ಉಚಿತ ಬಸ್: ರಥೋತ್ಸವ ದಿನದಂದು ಬರುವ ಭಕ್ತಾದಿಗಳಿಗಾಗಿ ದೊಡ್ಡಬಳ್ಳಾಪುರದ ಸಮೀಪದ ಕಂಟನಕುಂಟೆಯಿಂದ 15 ಮತ್ತು ಮಾಕಳಿಯಿಂದ 10 ಉಚಿತ ಕೆಎಸ್ಆರ್ಟಿಸಿ ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ. 4 ಮತ್ತು 2 ಚಕ್ರದ ವಾಹನಗಳಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.<br> ಜನವರಿ 1 ರಿಂದ 31 ರವರಗೆ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿದೆ.</p>.<p>ಸಂಚಾರ ಸುಗಮ ವ್ಯವಸ್ಥೆಗಾಗಿ ಸುಮಾರು 700 ಪೋಲಿಸ್ ಸಿಬ್ಬಂದಿ ಮತ್ತು 200 ಹೋಂ ಗಾರ್ಡ್ಗಳನ್ನು ನಿಯೋಜಿಸಲಾಗಿದೆ. ಸರಗಳ್ಳತನ, ಜೇಬುಗಳ್ಳತನ ಹಾಗೂ ಯಾವುದೇ ಅವಘಡ ನಡೆಯದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಕ್ಷೇತ್ರದ 1 ಕಿ.ಮೀ ಸುತ್ತಳತೆಯಲ್ಲಿ ಸುಮಾರು 80 ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಸಲಾಗಿದೆ. </p>.<p>ತುರ್ತು ಸೇವೆಗಾಗಿ 3 ಅಂಬುಲೆನ್ಸ್ ಮತ್ತು ಆರೋಗ್ಯ ಇಲಾಖೆ ತಂಡವನ್ನು ಹಾಗೂ ಅಗ್ನಿ ಶಾಮಕ ವಾಹನದ ವ್ಯವಸ್ಥೆ ಮಾಡಲಾಗಿದೆ. ಡಿ. 23ರಿಂದ 28 ರವರೆಗೆ ವಿಶೇಷ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರು, ಅಂಗವಿಕಲರು, ಗರ್ಭಿಣಿಯರಿಗೆ ನೇರ ದರ್ಶನ ವ್ಯವಸ್ಥೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ತಾಲ್ಲೂಕಿನ ಘಾಟಿ ಕ್ಷೇತ್ರದಲ್ಲಿ ಡಿ. 25ರಂದು ನಡೆಯಲಿರುವ ಸುಬ್ರಹ್ಮಣ್ಯ ರಥೋತ್ಸವ ಸಿದ್ಧತೆ ಭರದಿಂದ ನಡೆದಿದೆ.</p>.<p>ರಥೋತ್ಸವದಂದು ಪ್ರತಃಕಾಲ 2 ಗಂಟೆಗೆ ದೇವಾಲಯ ತೆರೆಯಲಾಗುತ್ತದೆ. 2.30ಕ್ಕೆ ಅಭಿಷೇಕ ಪ್ರಾರಂಭವಾಗಿ ಬೆಳಿಗ್ಗೆ 4.30ಕ್ಕೆ ಮಂಗಳಾರತಿ ನಡೆಯಲಿದೆ.<br> ಬೆಳಗೆ 5 ರಿಂದ 6 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 6 ಗಂಟೆಯಿಂದ ಭಕ್ತಾದಿಗಳಿಗಾಗಿ ಧರ್ಮದರ್ಶನ ಮತ್ತು ₹50ರ ವಿಶೇಷ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<p>ಉಚಿತ ಬಸ್: ರಥೋತ್ಸವ ದಿನದಂದು ಬರುವ ಭಕ್ತಾದಿಗಳಿಗಾಗಿ ದೊಡ್ಡಬಳ್ಳಾಪುರದ ಸಮೀಪದ ಕಂಟನಕುಂಟೆಯಿಂದ 15 ಮತ್ತು ಮಾಕಳಿಯಿಂದ 10 ಉಚಿತ ಕೆಎಸ್ಆರ್ಟಿಸಿ ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ. 4 ಮತ್ತು 2 ಚಕ್ರದ ವಾಹನಗಳಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.<br> ಜನವರಿ 1 ರಿಂದ 31 ರವರಗೆ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿದೆ.</p>.<p>ಸಂಚಾರ ಸುಗಮ ವ್ಯವಸ್ಥೆಗಾಗಿ ಸುಮಾರು 700 ಪೋಲಿಸ್ ಸಿಬ್ಬಂದಿ ಮತ್ತು 200 ಹೋಂ ಗಾರ್ಡ್ಗಳನ್ನು ನಿಯೋಜಿಸಲಾಗಿದೆ. ಸರಗಳ್ಳತನ, ಜೇಬುಗಳ್ಳತನ ಹಾಗೂ ಯಾವುದೇ ಅವಘಡ ನಡೆಯದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಕ್ಷೇತ್ರದ 1 ಕಿ.ಮೀ ಸುತ್ತಳತೆಯಲ್ಲಿ ಸುಮಾರು 80 ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಸಲಾಗಿದೆ. </p>.<p>ತುರ್ತು ಸೇವೆಗಾಗಿ 3 ಅಂಬುಲೆನ್ಸ್ ಮತ್ತು ಆರೋಗ್ಯ ಇಲಾಖೆ ತಂಡವನ್ನು ಹಾಗೂ ಅಗ್ನಿ ಶಾಮಕ ವಾಹನದ ವ್ಯವಸ್ಥೆ ಮಾಡಲಾಗಿದೆ. ಡಿ. 23ರಿಂದ 28 ರವರೆಗೆ ವಿಶೇಷ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರು, ಅಂಗವಿಕಲರು, ಗರ್ಭಿಣಿಯರಿಗೆ ನೇರ ದರ್ಶನ ವ್ಯವಸ್ಥೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>