ಮಗನ ಸಾವಿನ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಮೃತ ವಿದ್ಯಾರ್ಥಿ ತಂದೆ ವೆಂಕಟಶಿವರೆಡ್ಡಿ, ಹಾಸ್ಟೆಲ್ನ 6ನೇ ಮಹಡಿಯಲ್ಲಿ ಈಗಷ್ಟೇ ಕಾಮಗಾರಿ ನಡೆಯುತ್ತಿದೆ. ಇಲ್ಲಿ ಯಾವುದೇ ರೀತಿಯ ಮುಂಜಾಗೃತ ಕ್ರಮ ಕೈಗೊಂಡಿಲ್ಲ. ಕಾಲೇಜಿನ ಆಡಳಿತ ಮಂಡಳಿ ಹಾಗೂ ಕಟ್ಟಡ ಗುತ್ತಿಗೆದಾರರ ನಿರ್ಲಕ್ಷ್ಯವೇ ಮಗನ ಸಾವಿಗೆ ಕಾರಣ. ನಿರ್ಲಕ್ಷ್ಯ ವಹಿಸಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.