<p><strong>ಹೊಸಕೋಟೆ: ‘</strong>ಜನರಿಗೆ ಲಸಿಕೆ ನೀಡುವುದರಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದ ಪರಿಣಾಮವಾಗಿ ಇಂದು ಸಮಸ್ಯೆ ಎದುರಿಸುವಂತಾಗಿದೆ’ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ತಾಲ್ಲೂಕಿನ ಕೊಳತೂರು ಗ್ರಾಮದಲ್ಲಿ ಫೀವರ್ ಕ್ಯಾಂಪ್ಗೆ ಭೇಟಿ ನೀಡಿ ಮಾತನಾಡಿದರು.</p>.<p>‘ಪ್ರಾರಂಭದಲ್ಲಿ ಸರ್ಕಾರ ಲಸಿಕೆಗೆ ಹೆಚ್ಚಿನ ಪ್ರಚಾರ ನೀಡಬೇಕಾಗಿತ್ತು. ಜನತೆ ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿತ್ತು. ಕಳೆದ ವರ್ಷ ದೀಪ ಹಚ್ಚಿದವರು, ತಟ್ಟೆ ಬಾರಿಸಿದವರು ಈ ಬಾರಿ ಲಸಿಕೆಯ ಬಗ್ಗೆ ತಿಳಿಸಿದ್ದರೆ ಅದನ್ನು ಮಾಡುತ್ತಿದ್ದರು. ಆದರೆ ಸರ್ಕಾರ ಅದನ್ನು ಮಾಡದೆ ಕೊರೊನಾ ಎರಡನೇ ಅಲೆ ಹೆಚ್ಚಾದ ನಂತರ ಎಚ್ಚೆತ್ತುಕೊಂಡು ಈಗ ಸಮಸ್ಯೆ ತಂದೊಡ್ಡಿದೆ’ ಎಂದರು.</p>.<p>ರಾಜ್ಯದಲ್ಲಿಯೇ ಮೊದಲ ಬಾರಿ ಫೀವರ್ ಕ್ಲಿನಿಕ್ ವ್ಯವಸ್ಥೆಯನ್ನು ಎಂವಿಜೆ ಆಸ್ಪತ್ರೆ ಮತ್ತು ಜಿಲ್ಲಾ ಆಡಳಿತ ಮತ್ತು ತಾಲ್ಲೂಕು ಆಡಳಿತ ಸಹಯೋಗದೊಂದಿಗೆ ನಡೆಸಲಾಗುತ್ತಿದೆ. ಗ್ರಾಮಾಂತರದ ಜನತೆಯ ಅನುಕೂಲಕ್ಕಾಗಿ ಆಸ್ಪತ್ರೆಯನ್ನೇ ಜನರ ಬಳಿ ತೆಗೆದುಕೊಂಡು ಹೋಗುವ ಯೋಜನೆಯೇ ಫೀವರ್ ಕ್ಲಿನಿಕ್ ಎಂದರು.</p>.<p>ತಾಲ್ಲೂಕಿನಲ್ಲಿ 15 ವಾಹನಗಳಲ್ಲಿ ತಾಲ್ಲೂಕಿನ ಎಲ್ಲಾ ಹಳ್ಳಿಗಳಿಗೂ ತೆರಳಿ ಅಲ್ಲಿಯೇ ಜನರನ್ನು ಪರೀಕ್ಷಿಸಲಾಗುತ್ತದೆ. ಸೋಂಕಿನ ಲಕ್ಷಣ ಕಾಣಿಸಿದರೆ ಅವರಿಗೆ ಕೊರೊನಾ ಪರೀಕ್ಷೆ ಮಾಡಿಸಲು ಸಲಹೆ ನೀಡಿ, ಪ್ರಾಥಮಿಕ ಹಂತದ ಔಷಧಿ ನೀಡಲಾಗುತ್ತದೆ ಎಂದರು.</p>.<p>ಮುಖಂಡ ಕೋಡಿಹಳ್ಳಿ ಸುರೇಶ್, ಹನುಮಂತೇಗೌಡ, ಕೃಷ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: ‘</strong>ಜನರಿಗೆ ಲಸಿಕೆ ನೀಡುವುದರಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದ ಪರಿಣಾಮವಾಗಿ ಇಂದು ಸಮಸ್ಯೆ ಎದುರಿಸುವಂತಾಗಿದೆ’ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.</p>.<p>ತಾಲ್ಲೂಕಿನ ಕೊಳತೂರು ಗ್ರಾಮದಲ್ಲಿ ಫೀವರ್ ಕ್ಯಾಂಪ್ಗೆ ಭೇಟಿ ನೀಡಿ ಮಾತನಾಡಿದರು.</p>.<p>‘ಪ್ರಾರಂಭದಲ್ಲಿ ಸರ್ಕಾರ ಲಸಿಕೆಗೆ ಹೆಚ್ಚಿನ ಪ್ರಚಾರ ನೀಡಬೇಕಾಗಿತ್ತು. ಜನತೆ ಕೇಂದ್ರ ಸರ್ಕಾರ ಹೇಳಿದಂತೆ ಕೇಳುತ್ತಿತ್ತು. ಕಳೆದ ವರ್ಷ ದೀಪ ಹಚ್ಚಿದವರು, ತಟ್ಟೆ ಬಾರಿಸಿದವರು ಈ ಬಾರಿ ಲಸಿಕೆಯ ಬಗ್ಗೆ ತಿಳಿಸಿದ್ದರೆ ಅದನ್ನು ಮಾಡುತ್ತಿದ್ದರು. ಆದರೆ ಸರ್ಕಾರ ಅದನ್ನು ಮಾಡದೆ ಕೊರೊನಾ ಎರಡನೇ ಅಲೆ ಹೆಚ್ಚಾದ ನಂತರ ಎಚ್ಚೆತ್ತುಕೊಂಡು ಈಗ ಸಮಸ್ಯೆ ತಂದೊಡ್ಡಿದೆ’ ಎಂದರು.</p>.<p>ರಾಜ್ಯದಲ್ಲಿಯೇ ಮೊದಲ ಬಾರಿ ಫೀವರ್ ಕ್ಲಿನಿಕ್ ವ್ಯವಸ್ಥೆಯನ್ನು ಎಂವಿಜೆ ಆಸ್ಪತ್ರೆ ಮತ್ತು ಜಿಲ್ಲಾ ಆಡಳಿತ ಮತ್ತು ತಾಲ್ಲೂಕು ಆಡಳಿತ ಸಹಯೋಗದೊಂದಿಗೆ ನಡೆಸಲಾಗುತ್ತಿದೆ. ಗ್ರಾಮಾಂತರದ ಜನತೆಯ ಅನುಕೂಲಕ್ಕಾಗಿ ಆಸ್ಪತ್ರೆಯನ್ನೇ ಜನರ ಬಳಿ ತೆಗೆದುಕೊಂಡು ಹೋಗುವ ಯೋಜನೆಯೇ ಫೀವರ್ ಕ್ಲಿನಿಕ್ ಎಂದರು.</p>.<p>ತಾಲ್ಲೂಕಿನಲ್ಲಿ 15 ವಾಹನಗಳಲ್ಲಿ ತಾಲ್ಲೂಕಿನ ಎಲ್ಲಾ ಹಳ್ಳಿಗಳಿಗೂ ತೆರಳಿ ಅಲ್ಲಿಯೇ ಜನರನ್ನು ಪರೀಕ್ಷಿಸಲಾಗುತ್ತದೆ. ಸೋಂಕಿನ ಲಕ್ಷಣ ಕಾಣಿಸಿದರೆ ಅವರಿಗೆ ಕೊರೊನಾ ಪರೀಕ್ಷೆ ಮಾಡಿಸಲು ಸಲಹೆ ನೀಡಿ, ಪ್ರಾಥಮಿಕ ಹಂತದ ಔಷಧಿ ನೀಡಲಾಗುತ್ತದೆ ಎಂದರು.</p>.<p>ಮುಖಂಡ ಕೋಡಿಹಳ್ಳಿ ಸುರೇಶ್, ಹನುಮಂತೇಗೌಡ, ಕೃಷ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>