ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ಹನುಮಯ್ಯ ಮತ್ತು ಪುಷ್ಪಮೋಹನ್ ಅವರಿಗೆ ರಂಗಕಲಾ ಜ್ಯೋತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ಗೌರವಾಧ್ಯಕ್ಷ ಕೆ.ಎಂ. ಕೃಷ್ಣಮೂರ್ತಿ, ರಂಗ ಕಲಾವಿದರ ಸಂಘದ ಪದಾಧಿಕಾರಿಗಳು ಮತ್ತು ಕಲಾವಿದರು ಇದ್ದರು.