ಬಿಜೆಪಿ ಮಂಡಲ ಅಧ್ಯಕ್ಷ ಬಿ.ಬಿ.ಐ. ಮುನಿರೆಡ್ಡಿ ಮಾತನಾಡಿ, ಗ್ರಾಮದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುತ್ತವೆ. ಗ್ರಾಮದಲ್ಲಿ ಯುವಕರು, ಗ್ರಾಮಸ್ಥರು ಒಗ್ಗೂಡಿ ಸಾಮರಸ್ಯ ಗ್ರಾಮ ಎಂದು ಘೋಷಿಸಲಾಗಿದೆ. ಇದರಿಂದ ಎಲ್ಲರಲ್ಲೂ ಒಗ್ಗಟ್ಟು ಮೂಡುತ್ತದೆ. ಸಾಮರಸ್ಯ ಎಂಬುದು ಪ್ರತಿಯೊಂದು ಮನೆಗಳಲ್ಲಿಯೂ ಮೂಡಬೇಕು ಎಂದರು.