<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಸಾಸಲು ಹೋಬಳಿ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು ಗ್ರಾಮಸ್ಥರು ಮನೆಯಿಂದ ಹೊರಬರಲು ಹೆದರುವ ಪರಿಸ್ಥಿತಿ ಇದೆ.</p>.<p>ಬೆಟ್ಟದ ಸಾಲಿನ ಕುರುಚಲು ಕಾಡಿಗೆ ಹೊಂದಿಕೊಂಡಂತಿರುವ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಒಂದೇ ದಿನ ಕರು ಹಾಗೂ ಮೇಕೆ ಮೇಲೆ ದಾಳಿ ನಡೆಸಿರುವ ಚಿರತೆ ಅವುಗಳನ್ನು ಅರೆಬರೆ ತಿಂದಿದೆ.</p>.<p>ರೈತ ಲಕ್ಷ್ಮಿನಾರಾಯಣಪ್ಪ ಅವರು ಮೇಕೆ ಮೇಯಿಸಲು ಬೆಟ್ಟದ ತಪ್ಪಲಿಗೆ ತೆರಳಿದಾಗ ಸದ್ದಿಲ್ಲದೆ ₹6ಸಾವಿರ ಮೌಲ್ಯದ ಮೇಕೆ ಎಳೆದೊಯ್ದು ತಿಂದಿದೆ. ರಾಮಕೃಷ್ಣಪ್ಪ ಎಂಬುವರ ₹8ಸಾವಿರ ಮೌಲ್ಯದ ಸೀಮೆ ಕರು ಬಲಿ ಪಡೆದಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ.</p>.<p>ಮೂರು ತಿಂಗಳುಗಳ ಹಿಂದೆ ಇದೇ ರೀತಿ ಘಟನೆ ನಡೆದಿತ್ತು. ಮತ್ತೆ ಈಗ ಒಂದೇ ದಿನ ಎರಡು ಪ್ರಾಣಿಗಳ ಮೇಲೆ ಚಿರತೆ ದಾಳಿ ಮಾಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಅರಣ್ಯ ಇಲಾಖೆ ಚಿರತೆ ಹಿಡಿಯಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಸಾಸಲು ಹೋಬಳಿ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು ಗ್ರಾಮಸ್ಥರು ಮನೆಯಿಂದ ಹೊರಬರಲು ಹೆದರುವ ಪರಿಸ್ಥಿತಿ ಇದೆ.</p>.<p>ಬೆಟ್ಟದ ಸಾಲಿನ ಕುರುಚಲು ಕಾಡಿಗೆ ಹೊಂದಿಕೊಂಡಂತಿರುವ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಒಂದೇ ದಿನ ಕರು ಹಾಗೂ ಮೇಕೆ ಮೇಲೆ ದಾಳಿ ನಡೆಸಿರುವ ಚಿರತೆ ಅವುಗಳನ್ನು ಅರೆಬರೆ ತಿಂದಿದೆ.</p>.<p>ರೈತ ಲಕ್ಷ್ಮಿನಾರಾಯಣಪ್ಪ ಅವರು ಮೇಕೆ ಮೇಯಿಸಲು ಬೆಟ್ಟದ ತಪ್ಪಲಿಗೆ ತೆರಳಿದಾಗ ಸದ್ದಿಲ್ಲದೆ ₹6ಸಾವಿರ ಮೌಲ್ಯದ ಮೇಕೆ ಎಳೆದೊಯ್ದು ತಿಂದಿದೆ. ರಾಮಕೃಷ್ಣಪ್ಪ ಎಂಬುವರ ₹8ಸಾವಿರ ಮೌಲ್ಯದ ಸೀಮೆ ಕರು ಬಲಿ ಪಡೆದಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ.</p>.<p>ಮೂರು ತಿಂಗಳುಗಳ ಹಿಂದೆ ಇದೇ ರೀತಿ ಘಟನೆ ನಡೆದಿತ್ತು. ಮತ್ತೆ ಈಗ ಒಂದೇ ದಿನ ಎರಡು ಪ್ರಾಣಿಗಳ ಮೇಲೆ ಚಿರತೆ ದಾಳಿ ಮಾಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಅರಣ್ಯ ಇಲಾಖೆ ಚಿರತೆ ಹಿಡಿಯಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>