<p><strong>ಆನೇಕಲ್: ‘</strong><strong>ಮನೆಗಳವು ಪ್ರಕರಣದಲ್ಲಿ ಬಂಧಿಸಲಾದ ಆರೋಪಿಗಳಿಂದ ಎರಡು ಕೆ.ಜಿ ಚಿನ್ನ ವಶಪಡಿಸಿಕೊಂಡ ಚಂದಾಪುರ– ಸೂರ್ಯಸಿಟಿ ಪೊಲೀಸರು ಕೇವಲ 200 ಗ್ರಾಂ ಚಿನ್ನ ಮಾತ್ರ ವಶಪಡಿಸಿಕೊಂಡಿರುವುದಾಗಿ ದಾಖಲೆಗಳಲ್ಲಿ ತೋರಿಸಿದ್ದಾರೆ’</strong></p>.<p><strong>ಸಾಮಾಜಿಕ ಕಾರ್ಯಕರ್ತ, ವಕೀಲ ವೆಂಕಟಾಚಲಪತಿ ಎಂಬುವವರು ಗುರುವಾರ ಚಂದಾಪುರ– ಸೂರ್ಯಸಿಟಿ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಎಸ್ಪಿ ನಾಗರಾಜ್ ನೇತೃತ್ವದಲ್ಲಿ ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ.</strong></p>.<p>ಚಂದಾಪುರ–ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಐದಾರು ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ಕಳ್ಳತನ ಪ್ರಕರಣ ದಾಖಲಾಗಿವೆ. ಒಂದೇ ತಂಡದಿಂದ ಈ ಎಲ್ಲಾ ಕಳ್ಳತನ ನಡೆಸಿದೆ ಎನ್ನಲಾಗಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಬಂಧಿತರಿಂದ 2 ಕೆ.ಜಿ ಬಂಗಾರ ವಶಪಡಿಸಿಕೊಂಡ ಸೂರ್ಯಸಿಟಿ ಪೊಲೀಸರು, ದಾಖಲೆಗಳಲ್ಲಿ 200 ಗ್ರಾಂ ಚಿನ್ನವನ್ನು ಮಾತ್ರ ವಶಪಡಿಸಿಕೊಂಡಿರುವುದಾಗಿ ಹೇಳಿದ್ದಾರೆ ಎಂದು ವೆಂಕಟಾಚಲಪತಿ ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: ‘</strong><strong>ಮನೆಗಳವು ಪ್ರಕರಣದಲ್ಲಿ ಬಂಧಿಸಲಾದ ಆರೋಪಿಗಳಿಂದ ಎರಡು ಕೆ.ಜಿ ಚಿನ್ನ ವಶಪಡಿಸಿಕೊಂಡ ಚಂದಾಪುರ– ಸೂರ್ಯಸಿಟಿ ಪೊಲೀಸರು ಕೇವಲ 200 ಗ್ರಾಂ ಚಿನ್ನ ಮಾತ್ರ ವಶಪಡಿಸಿಕೊಂಡಿರುವುದಾಗಿ ದಾಖಲೆಗಳಲ್ಲಿ ತೋರಿಸಿದ್ದಾರೆ’</strong></p>.<p><strong>ಸಾಮಾಜಿಕ ಕಾರ್ಯಕರ್ತ, ವಕೀಲ ವೆಂಕಟಾಚಲಪತಿ ಎಂಬುವವರು ಗುರುವಾರ ಚಂದಾಪುರ– ಸೂರ್ಯಸಿಟಿ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ವಿರುದ್ಧ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಎಸ್ಪಿ ನಾಗರಾಜ್ ನೇತೃತ್ವದಲ್ಲಿ ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ.</strong></p>.<p>ಚಂದಾಪುರ–ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಐದಾರು ತಿಂಗಳಲ್ಲಿ ಹತ್ತಕ್ಕೂ ಹೆಚ್ಚು ಕಳ್ಳತನ ಪ್ರಕರಣ ದಾಖಲಾಗಿವೆ. ಒಂದೇ ತಂಡದಿಂದ ಈ ಎಲ್ಲಾ ಕಳ್ಳತನ ನಡೆಸಿದೆ ಎನ್ನಲಾಗಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಬಂಧಿತರಿಂದ 2 ಕೆ.ಜಿ ಬಂಗಾರ ವಶಪಡಿಸಿಕೊಂಡ ಸೂರ್ಯಸಿಟಿ ಪೊಲೀಸರು, ದಾಖಲೆಗಳಲ್ಲಿ 200 ಗ್ರಾಂ ಚಿನ್ನವನ್ನು ಮಾತ್ರ ವಶಪಡಿಸಿಕೊಂಡಿರುವುದಾಗಿ ಹೇಳಿದ್ದಾರೆ ಎಂದು ವೆಂಕಟಾಚಲಪತಿ ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>