<p><strong>ಹೊಸಕೋಟೆ</strong>: ಕೆಲಸ ಮಾಡುತ್ತಿದ್ದ ಮನೆಯಲ್ಲಿ ₹87 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಮನೆಗೆಲಸದ ಮಹಿಳೆಯನ್ನು ಹೊಸಕೋಟೆ ಪೊಲೀಸರು ಬಂಧಿಸಿ, 793 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. </p>.<p>ಹಿರಿಯೂರಿನ ಶಕುಂತಲಾ ಬಂಧಿತ ಆರೋಪಿ. ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಿಂಬೇಕಾಯಿಪುರದ ಪೃಕ್ಷಾ ಸಿಲ್ವನಾ ವಿಲ್ಲಾದಲ್ಲಿ ಸುಮಂತ್ ಎಂಬುವವರ ಮನೆಯಲ್ಲಿ ಈಕೆ ಕೆಲಸ ಮಾಡುತ್ತಿದ್ದರು. ಮನೆಯ ಮಾಲೀಕರು ಊರಿಗೆ ಹೋದಾಗ ಚಿನ್ನದ ಒಡವೆ ಕದ್ದು, ಪರಾರಿಯಾಗಿದ್ದರು.</p>.<p>ಸುಮಂತ್ ದೂರು ಆಧರಿಸಿ ಶಂಕುತಲಾ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕದ್ದ ಒಡವೆಗಳನ್ನು ಹಿರಿಯೂರಿನ ತನ್ನ ಮನೆಯಲ್ಲಿ ಇರಿಸಿರುವುದಾಗಿ ತಿಳಿಸಿದಳು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ಭಾನುವಾರ<br />ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. </p>.<p><strong>ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ: </strong>ಕಿತಗನೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ನಂದಿಗಮ್ ಎಂಬುವರ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಹಣ, ಮೊಬೈಲ್, ಬೈಕ್ ಕದ್ದು ಪರಾರಿಯಾಗಿದ್ದ ಕಿತ್ತಗನೂರು ಗ್ರಾಮದ ಶ್ರೀಕಾಂತ್ ಎಂಬುವವರನ್ನು ಆವಲಹಳ್ಳಿ ಪೊಲೀಸರು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ಕೆಲಸ ಮಾಡುತ್ತಿದ್ದ ಮನೆಯಲ್ಲಿ ₹87 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಮನೆಗೆಲಸದ ಮಹಿಳೆಯನ್ನು ಹೊಸಕೋಟೆ ಪೊಲೀಸರು ಬಂಧಿಸಿ, 793 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. </p>.<p>ಹಿರಿಯೂರಿನ ಶಕುಂತಲಾ ಬಂಧಿತ ಆರೋಪಿ. ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಿಂಬೇಕಾಯಿಪುರದ ಪೃಕ್ಷಾ ಸಿಲ್ವನಾ ವಿಲ್ಲಾದಲ್ಲಿ ಸುಮಂತ್ ಎಂಬುವವರ ಮನೆಯಲ್ಲಿ ಈಕೆ ಕೆಲಸ ಮಾಡುತ್ತಿದ್ದರು. ಮನೆಯ ಮಾಲೀಕರು ಊರಿಗೆ ಹೋದಾಗ ಚಿನ್ನದ ಒಡವೆ ಕದ್ದು, ಪರಾರಿಯಾಗಿದ್ದರು.</p>.<p>ಸುಮಂತ್ ದೂರು ಆಧರಿಸಿ ಶಂಕುತಲಾ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕದ್ದ ಒಡವೆಗಳನ್ನು ಹಿರಿಯೂರಿನ ತನ್ನ ಮನೆಯಲ್ಲಿ ಇರಿಸಿರುವುದಾಗಿ ತಿಳಿಸಿದಳು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್.ಪಿ ಮಲ್ಲಿಕಾರ್ಜುನ ಬಾಲದಂಡಿ ಭಾನುವಾರ<br />ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. </p>.<p><strong>ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ: </strong>ಕಿತಗನೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ನಂದಿಗಮ್ ಎಂಬುವರ ಮೇಲೆ ಹಲ್ಲೆ ನಡೆಸಿ, ಬೆದರಿಸಿ ಹಣ, ಮೊಬೈಲ್, ಬೈಕ್ ಕದ್ದು ಪರಾರಿಯಾಗಿದ್ದ ಕಿತ್ತಗನೂರು ಗ್ರಾಮದ ಶ್ರೀಕಾಂತ್ ಎಂಬುವವರನ್ನು ಆವಲಹಳ್ಳಿ ಪೊಲೀಸರು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>