ಪ್ರಭಂಜನ ಎಜುಕೇಷನ್ ಟ್ರಸ್ಟ್ನ ಅಧ್ಯಕ್ಷ ಡಾ.ವಿ.ಎನ್.ರಮೇಶ್ ಮಾತನಾಡಿ, ‘ಸಾಧನೆ ಮಾಡಲುಹಲವು ಅವಕಾಶಗಳಿದ್ದರೂ, ಹಲವು ಪೋಷಕರು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿ, ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ಇದೆ. ಅಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ, ಬಾಲಕಾರ್ಮಿಕರ ವಸತಿ ಶಾಲೆ ತೆರೆದು, ಗುಣಮಟ್ಟದ ಶಿಕ್ಷಣ ನೀಡುವ ಕಾರ್ಯ ಮಾಡಲಾಗುತ್ತಿದೆ’ ಎಂದು ತಿಳಿಸಿದರು.