ತಾಲ್ಲೂಕಿನ ಬಹುತೇಕ ರೈತರು ಹೆಚ್ಚಿನ ಪ್ರಮಾಣದಲ್ಲಿ ರಾಗಿ, ಮುಸುಕಿನಜೋಳ, ಭತ್ತ, ನೆಲಗಡಲೆ, ನವಣೆ, ತೊಗರಿ, ಅಲಸಂದೆ, ಮತ್ತಿತರ ಬೆಳೆಗಳನ್ನು ಬಿತ್ತನೆ ಮಾಡಿದ್ದಾರೆ. ಹೊಲಗಳಲ್ಲಿ ಬೆಳೆ ಸಮೃದ್ಧವಾಗಿದೆ. ಕಳೆದ ವರ್ಷ ಮುಂಗಾರು ಕೈಕೊಟ್ಟಿದ್ದರಿಂದ ಮಳೆಯಾಶ್ರಿತ ನೆಲಗಡಲೆ ಮತ್ತು ರಾಗಿಯನ್ನು ಬೆಳೆದಿದ್ದ ರೈತರು ಕೈ ಸುಟ್ಟುಕೊಂಡಿದ್ದರು. ಈಗ ರಾಗಿ ತೆನೆ ಬರುವ ಹಂತದಲ್ಲಿದೆ. ನೆಲಗಡಲೆ ಉತ್ತಮವಾಗಿ ಕಾಯಿ ಬಿಟ್ಟಿದೆ ಎಂದು ಹೇಳಿದರು.