<p><strong>ತೂಬಗೆರೆ(ದೊಡ್ಡಬಳ್ಳಾಪುರ):</strong> ಇದೇ ಮೊದಲ ಬಾರಿಗೆ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಆಯೋಜಿಸಿದ್ದ ಹಲಸು ಮೇಳಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.</p>.<p>ಘಾಟಿ ಕ್ಷೇತ್ರದಲ್ಲಿ ಬುಧವಾರ ನಡೆದ ಮಾಂಗಲ್ಯ ಭಾಗ್ಯ ಸಾಮೂಹಿಕ ವಿವಾಹ ವೇದಿಕೆ ಸಮೀಪ ತಾಲ್ಲೂಕಿನ ಹಲಸು ಬೆಳೆಗಾರರು ಹಾಗೂ ವ್ಯಾಪಾರಿಗಳಿಂದ ಹಲಸು ಮೇಳ ಆಯೋಜಿಸಲಾಗಿತು.</p>.<p>ತಾಲ್ಲೂಕಿನ ವಿವಿಧ ಹೋಬಳಿಗಯ ವಿವಿಧ ಗ್ರಾಮಗಳಿಂದ ಹಳದಿ ಬಣ್ಣದ ಹೆಬ್ಬಲಸು, ಬೇರು ಹಲಸು, ಕೆಂಪು ತೊಳೆಯ ಚಂದ್ರಹಲಸಿನ ಹಣ್ಣುಗಳ ಮಾರಾಟ ಭರ್ಜರಿಯಾಗಿ ನಡೆಯಿತು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ನಾಥಸ್ವಾಮೀಜಿ, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಉಪವಿಭಾಗಾಧಿಕಾರಿ ಎನ್.ದುರ್ಗಾಶ್ರೀ, ತಹಶೀಲ್ದಾರ್ ವಿಭಾವಿದ್ಯಾ ರಾಥೋಡ್ ಸೇರಿದಂತೆ ಸಾರ್ವಜನಿಕರು ಹಲಸು ಮೇಳಕ್ಕೆ ಭೇಟಿ ನೀಡಿ ಹಲಸಿನ ರುಚಿ ಸವಿದರು.</p>.<p>‘ತೂಬಗೆರೆ ಪ್ರಾಂತ್ಯದ ಹಲಸಿನ ವಿಶೇಷತೆ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಇಲ್ಲಿನ ತಳಿಯ ಹಲಸಿನಲ್ಲಿ ವಿಶೇಷ ರುಚಿಯಿವೆ. ರೈತರಿಗೆ ಹಲಸು ಮೇಳದ ಆಯೋಜನೆಯಿಂದ ಹೆಚ್ಚಿನ ಪ್ರಯೋಜನಗಳಿವೆ’ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನಲ್ಲಿ ಹಲಸು ಮೇಳೆ ಆಯೋಜಿಸುವಂತೆ ಹಲಸು ಬೆಳೆಗಾರರು ಹಾಗೂ ವ್ಯಾಪಾರಿಗಳ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹಲಸು ಮೇಳ ನಡೆಸಲು ಅನುವು ಮಾಡಿಕೊಟ್ಟಿರುವುದು ಸಂತಸದ ವಿಚಾರ. ಹಲಸಿನ ಸುಗ್ಗಿ ಮುಗಿಯುವಷ್ಟರಲ್ಲಿ ಹಿಂದೂಪುರ-ಬೆಂಗಳೂರು ರಸ್ತೆ ಬದಿ ಹಾಗೂ ದೊಡ್ಡಬಳ್ಳಾಪುರ ನಗರದಲ್ಲಿ ಬೃಹತ್ ಹಲಸಿನ ಮೇಳ ನಡೆಸಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹಲಸು ವ್ಯಾಪಾರಿ ಮಂಜುನಾಥ್ ತಿಳಿಸಿದರು.</p>.<p>ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಹಲಸು ಬೆಳೆಗಾರ ಜಿ.ರಾಜಶೇಖರ್, ಕಸಬಾ ಹೋಬಳಿ ಹಾಗೂ ತೂಬಗೆರೆ ಹೋಬಳಿ ಭಾಗದ ಹಲಸು ಬೆಳೆಗಾರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೂಬಗೆರೆ(ದೊಡ್ಡಬಳ್ಳಾಪುರ):</strong> ಇದೇ ಮೊದಲ ಬಾರಿಗೆ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಆಯೋಜಿಸಿದ್ದ ಹಲಸು ಮೇಳಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.</p>.<p>ಘಾಟಿ ಕ್ಷೇತ್ರದಲ್ಲಿ ಬುಧವಾರ ನಡೆದ ಮಾಂಗಲ್ಯ ಭಾಗ್ಯ ಸಾಮೂಹಿಕ ವಿವಾಹ ವೇದಿಕೆ ಸಮೀಪ ತಾಲ್ಲೂಕಿನ ಹಲಸು ಬೆಳೆಗಾರರು ಹಾಗೂ ವ್ಯಾಪಾರಿಗಳಿಂದ ಹಲಸು ಮೇಳ ಆಯೋಜಿಸಲಾಗಿತು.</p>.<p>ತಾಲ್ಲೂಕಿನ ವಿವಿಧ ಹೋಬಳಿಗಯ ವಿವಿಧ ಗ್ರಾಮಗಳಿಂದ ಹಳದಿ ಬಣ್ಣದ ಹೆಬ್ಬಲಸು, ಬೇರು ಹಲಸು, ಕೆಂಪು ತೊಳೆಯ ಚಂದ್ರಹಲಸಿನ ಹಣ್ಣುಗಳ ಮಾರಾಟ ಭರ್ಜರಿಯಾಗಿ ನಡೆಯಿತು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ನಾಥಸ್ವಾಮೀಜಿ, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಉಪವಿಭಾಗಾಧಿಕಾರಿ ಎನ್.ದುರ್ಗಾಶ್ರೀ, ತಹಶೀಲ್ದಾರ್ ವಿಭಾವಿದ್ಯಾ ರಾಥೋಡ್ ಸೇರಿದಂತೆ ಸಾರ್ವಜನಿಕರು ಹಲಸು ಮೇಳಕ್ಕೆ ಭೇಟಿ ನೀಡಿ ಹಲಸಿನ ರುಚಿ ಸವಿದರು.</p>.<p>‘ತೂಬಗೆರೆ ಪ್ರಾಂತ್ಯದ ಹಲಸಿನ ವಿಶೇಷತೆ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಇಲ್ಲಿನ ತಳಿಯ ಹಲಸಿನಲ್ಲಿ ವಿಶೇಷ ರುಚಿಯಿವೆ. ರೈತರಿಗೆ ಹಲಸು ಮೇಳದ ಆಯೋಜನೆಯಿಂದ ಹೆಚ್ಚಿನ ಪ್ರಯೋಜನಗಳಿವೆ’ ಎಂದು ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನಲ್ಲಿ ಹಲಸು ಮೇಳೆ ಆಯೋಜಿಸುವಂತೆ ಹಲಸು ಬೆಳೆಗಾರರು ಹಾಗೂ ವ್ಯಾಪಾರಿಗಳ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹಲಸು ಮೇಳ ನಡೆಸಲು ಅನುವು ಮಾಡಿಕೊಟ್ಟಿರುವುದು ಸಂತಸದ ವಿಚಾರ. ಹಲಸಿನ ಸುಗ್ಗಿ ಮುಗಿಯುವಷ್ಟರಲ್ಲಿ ಹಿಂದೂಪುರ-ಬೆಂಗಳೂರು ರಸ್ತೆ ಬದಿ ಹಾಗೂ ದೊಡ್ಡಬಳ್ಳಾಪುರ ನಗರದಲ್ಲಿ ಬೃಹತ್ ಹಲಸಿನ ಮೇಳ ನಡೆಸಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹಲಸು ವ್ಯಾಪಾರಿ ಮಂಜುನಾಥ್ ತಿಳಿಸಿದರು.</p>.<p>ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಹಲಸು ಬೆಳೆಗಾರ ಜಿ.ರಾಜಶೇಖರ್, ಕಸಬಾ ಹೋಬಳಿ ಹಾಗೂ ತೂಬಗೆರೆ ಹೋಬಳಿ ಭಾಗದ ಹಲಸು ಬೆಳೆಗಾರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>