<p><strong>ದೇವನಹಳ್ಳಿ</strong>: ‘ಜನರ ಬೇಡಿಕೆಗೆ ಅನುಗುಣವಾಗಿ ಲಸಿಕೆ ಪೂರೈಕೆ ಮಾಡುವಲ್ಲಿ ವಿಫಲವಾಗಿರುವ ಸರ್ಕಾರ ಅನುಮತಿ ನೀಡಿದರೆ ₹ 100 ಕೋಟಿ ಮೌಲ್ಯದ ಲಸಿಕೆ ಖರೀದಿಸಿ ಜನರಿಗೆ ಉಚಿತವಾಗಿ ನೀಡುವ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ಆದರೆ, ಸರ್ಕಾರ ಅನುಮತಿ ನೀಡುತ್ತಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಎಸ್. ರವಿ ದೂರಿದರು.</p>.<p>ತಾಲ್ಲೂಕಿನ ಬೀರಸಂದ್ರದ ಬಳಿಯಿರುವ ಜಿಲ್ಲಾಡಳಿತ ಭವನದಲ್ಲಿ ಗುರುವಾರ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ಕೊರೊನಾ ತಡೆಗಟ್ಟಲು ಆಸ್ಪತ್ರೆಗಳಿಗೆ ಅವಶ್ಯಕ ಸಾಮಗ್ರಿ ಖರೀದಿಗಾಗಿ ₹ 25 ಲಕ್ಷ ಮಂಜೂರಾತಿಯ ಪತ್ರವನ್ನು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರಿಗೆ ವಿತರಿಸಿ ಅವರು ಮಾತನಾಡಿದರು.</p>.<p>ಯಾವಾಗ ಲಸಿಕೆ ಕೊಡ್ತೀರಿ ಎಂದು ಜನರು ಕೇಳಿರಲಿಲ್ಲ. ಸರ್ಕಾರವೇ ಹೇಳಿ ಸಮಯಕ್ಕೆ ಸರಿಯಾಗಿ ಲಸಿಕೆ ಪೂರೈಕೆ ಮಾಡುವಲ್ಲಿ ವಿಫಲವಾಗಿದೆ. 18-44 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ನೋಂದಣಿ ಮಾಡಿಕೊಳ್ಳಿ ಎಂದು ಹೇಳಿಕೆ ನೀಡಿ ನಂತರ ಮಾತಿಗೆ ತಪ್ಪಿದೆ ಎಂದರು.</p>.<p>ಈ ಹಿಂದೆ ಕೋವ್ಯಾಕ್ಸಿನ್ ಪಡೆದುಕೊಂಡಿರುವವರು 2ನೇ ಡೋಸ್ ಪಡೆಯಲು ಪರದಾಡುತ್ತಿದ್ದಾರೆ. 75 ದಿನಗಳಾಗಿದ್ದರೂ ಕೊಟ್ಟಿಲ್ಲ. ಮೊದಲ ಡೋಸ್ ಪಡೆಯುವವರಿಗೂ ಸರಿಯಾಗಿ ಲಸಿಕೆ ಪೂರೈಕೆಯಾಗುತ್ತಿಲ್ಲ. ಬೆಡ್ ಬ್ಲಾಕಿಂಗ್ ನಡೆಯುತ್ತಿದೆ ಎಂದು ಸುಳ್ಳು ಆರೋಪ ಮಾಡಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಸಂಸದರೇ ಖಾಸಗಿ ಕ್ಲಿನಿಕ್ಗಳಲ್ಲಿ ₹ 900 ಕೊಟ್ಟು ಲಸಿಕೆ ಹಾಕಿಸಿಕೊಳ್ಳುವಂತೆ ಹೇಳ್ತಾರೆ. ಪೋಸ್ಟರ್ಗಳನ್ನು ಹಾಕಿಕೊಳ್ಳುತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಾಕಿದ್ದಾರೆ ಎಂದು ದೂರಿದರು.</p>.<p>ಉಚಿತವಾಗಿ ನೀಡಬೇಕಾದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳ ಜೊತೆಗೆ ಶಾಮೀಲಾಗಿ ಬಡವರಿಂದ ಹಣ ಲೂಟಿ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಅನುಮಾನ ಮೂಡುತ್ತಿದೆ. ಹೆಣದ ಮೇಲೆ ಹಣ ಮಾಡಲಿಕ್ಕೆ ಹೊರಟಿರುವ ಸರ್ಕಾರವಾಗಿ ಕೆಲಸ ಮಾಡುತ್ತಿದೆ. ಈ ಸರ್ಕಾರದಲ್ಲಿ ಬಡವರಿಗೆ ನ್ಯಾಯ ಒದಗಿಸಲಿಕ್ಕೆ ಸಾಧ್ಯವಿಲ್ಲ ಎಂದರು.</p>.<p>ರಾಜ್ಯ ಸರ್ಕಾರದಿಂದ ಘೋಷಣೆ ಮಾಡಿರುವ ಪ್ಯಾಕೇಜ್ ಕೇವಲ ಕುರ್ಚಿ ಉಳಿಸಿಕೊಳ್ಳುವ ನೆಪವಷ್ಟೇ. ಇದರಿಂದ ಯಾರಿಗೂ ಪ್ರಯೋಜನವಾಗುತ್ತಿಲ್ಲ. ಇದೆಲ್ಲಾ ಸುಳ್ಳಿನ ಕಂತೆಯಾಗಿದೆ. ₹ 600 ಕೋಟಿ ಫಸಲ್ ಭೀಮಾ ಯೋಜನೆಯ ಹಣವನ್ನು ಪ್ಯಾಕೇಜ್ಗೆ ನೀಡಿದ್ದಾರೆ. ಸಹಕಾರ ಸಂಘಗಳ ಬಡ್ಡಿಯನ್ನೂ ಸೇರಿಸಲಾಗಿದೆ. ಕೊರೊನಾ ಮುಗಿದ ನಂತರ ಹಣ ನೀಡಿದರೆ ಪ್ರಯೋಜನವೇನು? ಎಂದು ಪ್ರಶ್ನಿಸಿದರು.</p>.<p>ದೇವನಹಳ್ಳಿಯಲ್ಲಿ ಜಿಲ್ಲಾ ಆಸ್ಪತ್ರೆಯಿಲ್ಲದಿದ್ದರೂ ಜಿಲ್ಲಾಡಳಿತ ಕೊರೊನಾ ಸೋಂಕು ನಿವಾರಣೆಗಾಗಿ ಸಾಕಷ್ಟು ಕ್ರಮ ಕೈಗೊಂಡಿದೆ. ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದರು.</p>.<p>ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಉಪಾಧ್ಯಕ್ಷ ಶಾಂತ್ ಕುಮಾರ್, ಮುಖಂಡ ಬಿ. ರಾಜಣ್ಣ, ಸೋಮಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ‘ಜನರ ಬೇಡಿಕೆಗೆ ಅನುಗುಣವಾಗಿ ಲಸಿಕೆ ಪೂರೈಕೆ ಮಾಡುವಲ್ಲಿ ವಿಫಲವಾಗಿರುವ ಸರ್ಕಾರ ಅನುಮತಿ ನೀಡಿದರೆ ₹ 100 ಕೋಟಿ ಮೌಲ್ಯದ ಲಸಿಕೆ ಖರೀದಿಸಿ ಜನರಿಗೆ ಉಚಿತವಾಗಿ ನೀಡುವ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ಆದರೆ, ಸರ್ಕಾರ ಅನುಮತಿ ನೀಡುತ್ತಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಎಸ್. ರವಿ ದೂರಿದರು.</p>.<p>ತಾಲ್ಲೂಕಿನ ಬೀರಸಂದ್ರದ ಬಳಿಯಿರುವ ಜಿಲ್ಲಾಡಳಿತ ಭವನದಲ್ಲಿ ಗುರುವಾರ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ಕೊರೊನಾ ತಡೆಗಟ್ಟಲು ಆಸ್ಪತ್ರೆಗಳಿಗೆ ಅವಶ್ಯಕ ಸಾಮಗ್ರಿ ಖರೀದಿಗಾಗಿ ₹ 25 ಲಕ್ಷ ಮಂಜೂರಾತಿಯ ಪತ್ರವನ್ನು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರಿಗೆ ವಿತರಿಸಿ ಅವರು ಮಾತನಾಡಿದರು.</p>.<p>ಯಾವಾಗ ಲಸಿಕೆ ಕೊಡ್ತೀರಿ ಎಂದು ಜನರು ಕೇಳಿರಲಿಲ್ಲ. ಸರ್ಕಾರವೇ ಹೇಳಿ ಸಮಯಕ್ಕೆ ಸರಿಯಾಗಿ ಲಸಿಕೆ ಪೂರೈಕೆ ಮಾಡುವಲ್ಲಿ ವಿಫಲವಾಗಿದೆ. 18-44 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ. ನೋಂದಣಿ ಮಾಡಿಕೊಳ್ಳಿ ಎಂದು ಹೇಳಿಕೆ ನೀಡಿ ನಂತರ ಮಾತಿಗೆ ತಪ್ಪಿದೆ ಎಂದರು.</p>.<p>ಈ ಹಿಂದೆ ಕೋವ್ಯಾಕ್ಸಿನ್ ಪಡೆದುಕೊಂಡಿರುವವರು 2ನೇ ಡೋಸ್ ಪಡೆಯಲು ಪರದಾಡುತ್ತಿದ್ದಾರೆ. 75 ದಿನಗಳಾಗಿದ್ದರೂ ಕೊಟ್ಟಿಲ್ಲ. ಮೊದಲ ಡೋಸ್ ಪಡೆಯುವವರಿಗೂ ಸರಿಯಾಗಿ ಲಸಿಕೆ ಪೂರೈಕೆಯಾಗುತ್ತಿಲ್ಲ. ಬೆಡ್ ಬ್ಲಾಕಿಂಗ್ ನಡೆಯುತ್ತಿದೆ ಎಂದು ಸುಳ್ಳು ಆರೋಪ ಮಾಡಿ ಪ್ರಚಾರ ಗಿಟ್ಟಿಸಿಕೊಂಡಿದ್ದ ಸಂಸದರೇ ಖಾಸಗಿ ಕ್ಲಿನಿಕ್ಗಳಲ್ಲಿ ₹ 900 ಕೊಟ್ಟು ಲಸಿಕೆ ಹಾಕಿಸಿಕೊಳ್ಳುವಂತೆ ಹೇಳ್ತಾರೆ. ಪೋಸ್ಟರ್ಗಳನ್ನು ಹಾಕಿಕೊಳ್ಳುತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಾಕಿದ್ದಾರೆ ಎಂದು ದೂರಿದರು.</p>.<p>ಉಚಿತವಾಗಿ ನೀಡಬೇಕಾದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳ ಜೊತೆಗೆ ಶಾಮೀಲಾಗಿ ಬಡವರಿಂದ ಹಣ ಲೂಟಿ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಅನುಮಾನ ಮೂಡುತ್ತಿದೆ. ಹೆಣದ ಮೇಲೆ ಹಣ ಮಾಡಲಿಕ್ಕೆ ಹೊರಟಿರುವ ಸರ್ಕಾರವಾಗಿ ಕೆಲಸ ಮಾಡುತ್ತಿದೆ. ಈ ಸರ್ಕಾರದಲ್ಲಿ ಬಡವರಿಗೆ ನ್ಯಾಯ ಒದಗಿಸಲಿಕ್ಕೆ ಸಾಧ್ಯವಿಲ್ಲ ಎಂದರು.</p>.<p>ರಾಜ್ಯ ಸರ್ಕಾರದಿಂದ ಘೋಷಣೆ ಮಾಡಿರುವ ಪ್ಯಾಕೇಜ್ ಕೇವಲ ಕುರ್ಚಿ ಉಳಿಸಿಕೊಳ್ಳುವ ನೆಪವಷ್ಟೇ. ಇದರಿಂದ ಯಾರಿಗೂ ಪ್ರಯೋಜನವಾಗುತ್ತಿಲ್ಲ. ಇದೆಲ್ಲಾ ಸುಳ್ಳಿನ ಕಂತೆಯಾಗಿದೆ. ₹ 600 ಕೋಟಿ ಫಸಲ್ ಭೀಮಾ ಯೋಜನೆಯ ಹಣವನ್ನು ಪ್ಯಾಕೇಜ್ಗೆ ನೀಡಿದ್ದಾರೆ. ಸಹಕಾರ ಸಂಘಗಳ ಬಡ್ಡಿಯನ್ನೂ ಸೇರಿಸಲಾಗಿದೆ. ಕೊರೊನಾ ಮುಗಿದ ನಂತರ ಹಣ ನೀಡಿದರೆ ಪ್ರಯೋಜನವೇನು? ಎಂದು ಪ್ರಶ್ನಿಸಿದರು.</p>.<p>ದೇವನಹಳ್ಳಿಯಲ್ಲಿ ಜಿಲ್ಲಾ ಆಸ್ಪತ್ರೆಯಿಲ್ಲದಿದ್ದರೂ ಜಿಲ್ಲಾಡಳಿತ ಕೊರೊನಾ ಸೋಂಕು ನಿವಾರಣೆಗಾಗಿ ಸಾಕಷ್ಟು ಕ್ರಮ ಕೈಗೊಂಡಿದೆ. ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದರು.</p>.<p>ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಉಪಾಧ್ಯಕ್ಷ ಶಾಂತ್ ಕುಮಾರ್, ಮುಖಂಡ ಬಿ. ರಾಜಣ್ಣ, ಸೋಮಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>