ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನೂತನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ವಿ.ಪ್ರಸಾದ್ ಅವರನ್ನು ಅಭಿನಂದಿಸಿದ ನಂತರ ಮಾತನಾಡಿದ ಅವರು, ಎತ್ತಿನಹೊಳೆ ಕಾಮಗಾರಿ ವ್ಯಾಪ್ತಿಯಲ್ಲಿ ಬರುವ ರೈತರ ಭೂಮಿ ಸ್ವಾಧೀನ ಪಡಿಸಿಕೊಂಡು ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ. ಉಪಚುನಾವಣೆ ಕಾಲಹರಣದ ನಂತರ ಸಂಪುಟ ವಿಸ್ತರಣೆಯ ಕಸರತ್ತಿನಲ್ಲಿ ಸರ್ಕಾರ ತಲ್ಲೀನವಾಗಿದೆಯೇ ಹೊರತು, ರಾಜ್ಯದಲ್ಲಿ ಶಾಶ್ವತ ಯೋಜನೆಗಳ ಬಗ್ಗೆ ಸಂಬಂಧಿಸಿದ ಸಚಿವರು ತಲೆ ಕೆಡೆಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.