ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಕರು, ಉಪನ್ಯಾಸಕರು ಜೀವನ ನಡೆಸಲು ಪರದಾಡುತ್ತಿದ್ದಾರೆ. ಮನೆ ಬಾಡಿಗೆ ಕಟ್ಟಿಲ್ಲ. ಕುಟುಂಬದ ಪೋಷಣೆಗಾಗಿ ತರಕಾರಿ ವ್ಯಾಪಾರ, ದಿನಗೂಲಿ ಕೆಲಸ ಮಾಡಿ ಜೀವನ ಮಾಡುತ್ತಿರುವವರು ಇದ್ದಾರೆ. ಇಂತಹ ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಖಾಸಗಿ ಶಾಲಾ, ಕಾಲೇಜುಗಳ ಸಿಬ್ಬಂದಿಯ ನೆರವಿಗೆ ಬರುವ ಬದಲಿಗೆ ಅವರನ್ನು ವಿಶೇಷ ಪ್ಯಾಕೇಜ್ನಿಂದ ಹೊರಗಿಟ್ಟಿರುವುದು ಖಂಡನೀಯ ಎಂದರು.