<p><strong>ಆನೇಕಲ್: </strong>ಗ್ರಾಮ ಪಂಚಾಯಿತಿ ನೌಕರರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಬೇಕೆಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಆನೇಕಲ್ ಪದಾಧಿಕಾರಿಗಳು ತಾಲ್ಲೂಕಿನ ಚಂದಾಪುರದ ಶಾಸಕರ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರಾಮಯ್ಯ ಮಾತನಾಡಿ, ಕರ್ನಾಟಕದಲ್ಲಿ ಸುಮಾರು 63 ಸಾವಿರ ಮಂದಿ ಗ್ರಾಮ ಪಂಚಾಯಿತಿ ನೌಕರರು, ಕರ ವಸೂಲಿಗಾರರು, ಕ್ಲರ್ಕ್ ಮತ್ತು ಡೇಟಾ ಆಪರೇಟರ್ಗಳು, ಸ್ವಚ್ಛತಾಗಾರರು, ವಾಟರ್ಮನ್ಗಳು ಕೆಲಸ ಮಾಡುತ್ತಿದ್ದಾರೆ. ಸೇವಾ ಜ್ಯೇಷ್ಠತೆ ಆಧಾರದಲ್ಲಿ ನೌಕರರಿಗೆ ₹36ಸಾವಿರ ವೇತನ ನೀಡಬೇಕು. ಚಾಮರಾಜನಗರ ಜಿಲ್ಲೆಯಲ್ಲಿ 27 ತಿಂಗಗಳಿನಿಂದ ವೇತನ ಸಿಗದೇ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೌಕರರಿಗೆ ನಿಗದಿತ ಅವಧಿಯಲ್ಲಿ ಸಂಬಳ ನೀಡಬೇಕು. ಈ ಬಗ್ಗೆ ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿಯ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಸೇವಾ ಹಿರಿತನ ಆಧರಿಸಿ ವೇತನ ಹೆಚ್ಚಳ ಮಾಡಬೇಕು. ಗ್ರಾಮ ಪಂಚಾಯಿತಿ ನೌಕರರು ನಿವೃತ್ತಿ ಅಥವಾ ಮರಣ ಹೊಂದಿದರೆ ಪ್ರತಿ ತಿಂಗಳು ಕನಿಷ್ಠ ₹600 ನೀಡಬೇಕು, ₹10 ಲಕ್ಷ ಇಡಗಂಟು ನೀಡಬೇಕು. ತರಬೇತಿ ಪಡೆದಿರುವ ಸ್ವಚ್ಛ ವಾಹಿನಿ ನೌಕರರಿಗೆ ಉದ್ಯೋಗ ನೀಡಬೇಕು.</p>.<p>ಹೆಚ್ಚುವರಿ ಕರವಸೂಲಿಗಾರರನ್ನು ನೇಮಕ ಮಾಡಬೇಕು. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಇ-ಹಾಜರಾತಿ ಲೋಪದೋಷಗಳನ್ನು ಪಂಚತಂತ್ರದಲ್ಲಿ ಸರಿಪಡಿಸುವವರೆಗೂ ಸಿಬ್ಬಂದಿಗಳಿಗೆ ಪೂರ್ಣ ವೇತನ ನೀಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಿರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕು. ಗ್ರೇಡ್–1ಗ್ರಾಮ ಪಂಚಾಯಿತಿಗಳನ್ನು ಜನಸಂಖ್ಯೆ ಆಧರಿಸಿ ಗ್ರಾಮ ಪಂಚಾಯಿತಿಗಳಾಗಿ ಮೇಲ್ದರ್ಜೇಗೇರಿಸಬೇಕು ಎಂದು ಒತ್ತಾಯಿಸಿದರು.</p>.<p>ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲ್ಲೂಕು ಖಜಾಂಚಿ ಜಿ.ವೀರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಆಗ್ಗದೂರಪ್ಪ, ರೇಣುಕಾ ಪ್ರಸಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಗ್ರಾಮ ಪಂಚಾಯಿತಿ ನೌಕರರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಬೇಕೆಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಆನೇಕಲ್ ಪದಾಧಿಕಾರಿಗಳು ತಾಲ್ಲೂಕಿನ ಚಂದಾಪುರದ ಶಾಸಕರ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರಾಮಯ್ಯ ಮಾತನಾಡಿ, ಕರ್ನಾಟಕದಲ್ಲಿ ಸುಮಾರು 63 ಸಾವಿರ ಮಂದಿ ಗ್ರಾಮ ಪಂಚಾಯಿತಿ ನೌಕರರು, ಕರ ವಸೂಲಿಗಾರರು, ಕ್ಲರ್ಕ್ ಮತ್ತು ಡೇಟಾ ಆಪರೇಟರ್ಗಳು, ಸ್ವಚ್ಛತಾಗಾರರು, ವಾಟರ್ಮನ್ಗಳು ಕೆಲಸ ಮಾಡುತ್ತಿದ್ದಾರೆ. ಸೇವಾ ಜ್ಯೇಷ್ಠತೆ ಆಧಾರದಲ್ಲಿ ನೌಕರರಿಗೆ ₹36ಸಾವಿರ ವೇತನ ನೀಡಬೇಕು. ಚಾಮರಾಜನಗರ ಜಿಲ್ಲೆಯಲ್ಲಿ 27 ತಿಂಗಗಳಿನಿಂದ ವೇತನ ಸಿಗದೇ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೌಕರರಿಗೆ ನಿಗದಿತ ಅವಧಿಯಲ್ಲಿ ಸಂಬಳ ನೀಡಬೇಕು. ಈ ಬಗ್ಗೆ ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತಬೇಕು ಎಂದು ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿಯ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಸೇವಾ ಹಿರಿತನ ಆಧರಿಸಿ ವೇತನ ಹೆಚ್ಚಳ ಮಾಡಬೇಕು. ಗ್ರಾಮ ಪಂಚಾಯಿತಿ ನೌಕರರು ನಿವೃತ್ತಿ ಅಥವಾ ಮರಣ ಹೊಂದಿದರೆ ಪ್ರತಿ ತಿಂಗಳು ಕನಿಷ್ಠ ₹600 ನೀಡಬೇಕು, ₹10 ಲಕ್ಷ ಇಡಗಂಟು ನೀಡಬೇಕು. ತರಬೇತಿ ಪಡೆದಿರುವ ಸ್ವಚ್ಛ ವಾಹಿನಿ ನೌಕರರಿಗೆ ಉದ್ಯೋಗ ನೀಡಬೇಕು.</p>.<p>ಹೆಚ್ಚುವರಿ ಕರವಸೂಲಿಗಾರರನ್ನು ನೇಮಕ ಮಾಡಬೇಕು. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಇ-ಹಾಜರಾತಿ ಲೋಪದೋಷಗಳನ್ನು ಪಂಚತಂತ್ರದಲ್ಲಿ ಸರಿಪಡಿಸುವವರೆಗೂ ಸಿಬ್ಬಂದಿಗಳಿಗೆ ಪೂರ್ಣ ವೇತನ ನೀಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಿರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕು. ಗ್ರೇಡ್–1ಗ್ರಾಮ ಪಂಚಾಯಿತಿಗಳನ್ನು ಜನಸಂಖ್ಯೆ ಆಧರಿಸಿ ಗ್ರಾಮ ಪಂಚಾಯಿತಿಗಳಾಗಿ ಮೇಲ್ದರ್ಜೇಗೇರಿಸಬೇಕು ಎಂದು ಒತ್ತಾಯಿಸಿದರು.</p>.<p>ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲ್ಲೂಕು ಖಜಾಂಚಿ ಜಿ.ವೀರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಆಗ್ಗದೂರಪ್ಪ, ರೇಣುಕಾ ಪ್ರಸಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>