‘ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ವಸತಿ ಯೋಜನೆಯ ಪ್ರಗತಿ ಶೇ 100ರಷ್ಟು ಸಾಧಿಸಲು ಸಂಬಂಧಪಟ್ಟ ಎಲ್ಲಾ ಅನುಷ್ಠಾನ ಅಧಿಕಾರಿಗಳು ಮುಂದಾಗಬೇಕು. ವಿವಿಧ ಇಲಾಖೆಗಳ ಪ್ರಗತಿಯಲ್ಲಿರುವ ಟೆಂಡರ್ ಪ್ರಕ್ರಿಯೆಯನ್ನು ಶೀಫ್ರ ಪೂರ್ಣಗೊಳಿಸಬೇಕು. ಪ್ರಸಕ್ತ 20 ಟನ್ ಮೇವಿನ ಅವಶ್ಯಕತೆ ಇದೆ. ಜಾನುವಾರುಗಳ ಮೇವಿನ ಕೊರತೆ ನೀಗಿಸಲು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಮೇವು ಖರೀದಿಗೆ ಮುಂದಾಗಬೇಕು’ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ, ಉಪ ಕಾರ್ಯದರ್ಶಿ ಕರಿಯಪ್ಪ ಇದ್ದರು.