ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ವಿಶ್ವನಾಥ್ಮಾತನಾಡಿ, ರಾಜ್ಯದ 6,024 ಗ್ರಾಮ ಪಂಚಾಯಿತಿಗಳಲ್ಲಿ ಸ್ವೀಪರ್, ವಾಟರ್ಮನ್, ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಇನ್ನಿತರ ಸಿಬ್ಬಂದಿ ಪ್ರತಿನಿತ್ಯ ಕೋವಿಡ್ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸೋಂಕಿನಿಂದ ಕೆಲವು ಸಿಬ್ಬಂದಿ ಮೃತರಾಗಿದ್ದಾರೆ. ಪಂಚಾಯಿತಿ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಸರ್ಕಾರ ಘೋಷಿಸಬೇಕು. ಕೋವಿಡ್ಗೆ ಒಳಗಾದ ಸಿಬ್ಬಂದಿಗೆ ಔಷಧ ವೆಚ್ಚ ಭರಿಸಬೇಕು. ಸುರಕ್ಷತಾ ಪರಿಕರ ಒದಗಿಸಬೇಕು ಎಂದು ಒತ್ತಾಯಿಸಿದರು.