ಅಂಚೆ ಮತಪತ್ರಕ್ಕಾಗಿ ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವುದನ್ನು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜೈಕುಮಾರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಪ್ರಭಾರ ಅಧ್ಯಕ್ಷ ಎಂ.ಎಸ್.ರಾಜಶೇಖರ್ ಖಂಡಿಸಿದ್ದಾರೆ. ಈ ಬಗ್ಗೆ ಮಾಹಿತಿ
ನೀಡಿ, ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹಲ್ಲೆ ನಡೆಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಅಂಚೆ ಮತಪತ್ರಗಳನ್ನು ಇತರ ಮತ ಪತ್ರಗಳೊಂದಿಗೆ ಮಿಶ್ರಣ ಮಾಡಿ ಎಣಿಕೆ ಮಾಡಬೇಕು. ಇದರಿಂದ ಯಾವ ಅಭ್ಯರ್ಥಿಗೆ ಅಂಚೆ ಮತ ಹಾಕಲಾಗಿದೆ ಎನ್ನುವುದು ತಿಳಿಯುವುದಿಲ್ಲ ಎಂದಿದ್ದಾರೆ.