<p>ಸರ್ಜಾಪುರ(ಆನೇಕಲ್): ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆ ಗೇರಿಸುವ ಹಾಗೂ ಜಿಬಿಎಗೆ ಸೇರಿಸುವುದರಿಂದ ಅನುಕೂಲಗಿಂತ ಅನನುಕೂಲವೇ ಜಾಸ್ತಿ. ಅಲ್ಲದೆ ಗಾಂಧಿಜೀ ಅವರ ಸ್ಥಳೀಯ ಆಡಳಿತ ಪರಿಕಲ್ಪನೆಗೆ ಪೆಟ್ಟು ನೀಡುತ್ತದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಯಮರೆ ಜಯಶಂಕರ್ ಹೇಳಿದರು.</p>.<p>ಇಲ್ಲಿಗೆ ಸಮೀಪದ ಬಿ.ಹೊಸಹಳ್ಳಿ ಶುಕ್ರವಾರ ನಡೆದ ಯಮರೆ ಗ್ರಾಮ ಪಂಚಾಯಿತಿಯ ಮೊದಲನೇ ಸುತ್ತಿನ ಗ್ರಾಮಸಭೆಯಲ್ಲಿ ಮಾತನಾಡಿದರು.</p>.<p>ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೂ ಇದು ಕಡೇಯ ಗ್ರಾಮಸಭೆಗಳಾಗಿವೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜಗೇರಿಸುವ ಅಥವಾ ಮಹಾನಗರ ಪಾಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗಲಿದೆ ಎಂದರು.</p>.<p>ಗ್ರಾಮ ಪಂಚಾಯಿತಿಗಳಲ್ಲಿನ ಸರ್ಕಾರಿ ಜಾಗಗಳಲ್ಲಿ ಮನೆ ಕಟ್ಟಿಕೊಂಡಿರುವವರಿಗೆ ಹಕ್ಕುಪತ್ರಗಳನ್ನು ನೀಡಬೇಕು. ಇಲ್ಲವಾದಲ್ಲಿ ಅವರಿಗೆ ವಸತಿಯ ಭದ್ರತೆಯೇ ಇರುವುದಿಲ್ಲ. ಯಮರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸರ್ಕಾರಿ ಜಾಗವು ಆಶ್ರಯ ಯೋಜನೆಗೆ ಮಂಜೂರಾಗಿ 30 ವರ್ಷ ಕಳೆದರೂ ಬಡವರಿಗೆ ಹಂಚಿಕೆಯಾಗಿಲ್ಲ. ಈ ಬಗ್ಗೆ ತಾಲ್ಲೂಕು ಆಡಳಿತ ಗಮನ ವಹಿಸಬೇಕು. ಸೂರಿಲ್ಲದವರಿಗೆ ಸೂರು ಕೊಡಬೇಕು ಎಂಬುದು ಗ್ರಾಮ ಪಂಚಾಯಿತಿಗಳ ಮುಖ್ಯ ಉದ್ದೇಶವಾಗಬೇಕು ಎಂದರು.</p>.<p>ಜಲ ಜೀವನ್ ಮಿಷನ್ ಯೋಜನೆಯಿಂದ ರಸ್ತೆಗಳು ಹಾಳಾಗುತ್ತಿವೆ. ಅನಾವಶ್ಯಕವಾಗಿ ಎಲ್ಲಂದರಲ್ಲಿ ಅಗೆಯುತ್ತಿರುವುದರಿಂದ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಜೆಎಂ ಯೋಜನೆಯಡಿಯಲ್ಲಿ ಎಲ್ಲಿಯೂ ಕಾಮಗಾರಿ ಪೂರ್ಣಗೊಂಡಿಲ್ಲ. ಕಾಮಗಾರಿಗೆ ವೇಗ ನೀಡಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.</p>.<p>ಯಮರೆ ಗ್ರಾಮ ಪಂಚಾಯಿತಿಯ ಆಡಳಿತ ಅಧಿಕಾರಿ ಪ್ರಶಾಂತ್ ಖಾನಗೌಡ ಪಾಟೀಲ್ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಕ್ಷಕರಿಗೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ, ಪೌರಕಾರ್ಮಿಕರು ಮತ್ತು ಗ್ರಾಮ ಪಂಚಾಯಿತಿಯ ಕಚೇರಿಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.</p>.<p>ಸಿಡಿಪಿಒ ಮಹೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣ್, ಕಾರ್ಯದರ್ಶಿ ಪ್ರಸಾದ್, ನಾರಾಯಣಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-15-334814697</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸರ್ಜಾಪುರ(ಆನೇಕಲ್): ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆ ಗೇರಿಸುವ ಹಾಗೂ ಜಿಬಿಎಗೆ ಸೇರಿಸುವುದರಿಂದ ಅನುಕೂಲಗಿಂತ ಅನನುಕೂಲವೇ ಜಾಸ್ತಿ. ಅಲ್ಲದೆ ಗಾಂಧಿಜೀ ಅವರ ಸ್ಥಳೀಯ ಆಡಳಿತ ಪರಿಕಲ್ಪನೆಗೆ ಪೆಟ್ಟು ನೀಡುತ್ತದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಯಮರೆ ಜಯಶಂಕರ್ ಹೇಳಿದರು.</p>.<p>ಇಲ್ಲಿಗೆ ಸಮೀಪದ ಬಿ.ಹೊಸಹಳ್ಳಿ ಶುಕ್ರವಾರ ನಡೆದ ಯಮರೆ ಗ್ರಾಮ ಪಂಚಾಯಿತಿಯ ಮೊದಲನೇ ಸುತ್ತಿನ ಗ್ರಾಮಸಭೆಯಲ್ಲಿ ಮಾತನಾಡಿದರು.</p>.<p>ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೂ ಇದು ಕಡೇಯ ಗ್ರಾಮಸಭೆಗಳಾಗಿವೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜಗೇರಿಸುವ ಅಥವಾ ಮಹಾನಗರ ಪಾಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗಲಿದೆ ಎಂದರು.</p>.<p>ಗ್ರಾಮ ಪಂಚಾಯಿತಿಗಳಲ್ಲಿನ ಸರ್ಕಾರಿ ಜಾಗಗಳಲ್ಲಿ ಮನೆ ಕಟ್ಟಿಕೊಂಡಿರುವವರಿಗೆ ಹಕ್ಕುಪತ್ರಗಳನ್ನು ನೀಡಬೇಕು. ಇಲ್ಲವಾದಲ್ಲಿ ಅವರಿಗೆ ವಸತಿಯ ಭದ್ರತೆಯೇ ಇರುವುದಿಲ್ಲ. ಯಮರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸರ್ಕಾರಿ ಜಾಗವು ಆಶ್ರಯ ಯೋಜನೆಗೆ ಮಂಜೂರಾಗಿ 30 ವರ್ಷ ಕಳೆದರೂ ಬಡವರಿಗೆ ಹಂಚಿಕೆಯಾಗಿಲ್ಲ. ಈ ಬಗ್ಗೆ ತಾಲ್ಲೂಕು ಆಡಳಿತ ಗಮನ ವಹಿಸಬೇಕು. ಸೂರಿಲ್ಲದವರಿಗೆ ಸೂರು ಕೊಡಬೇಕು ಎಂಬುದು ಗ್ರಾಮ ಪಂಚಾಯಿತಿಗಳ ಮುಖ್ಯ ಉದ್ದೇಶವಾಗಬೇಕು ಎಂದರು.</p>.<p>ಜಲ ಜೀವನ್ ಮಿಷನ್ ಯೋಜನೆಯಿಂದ ರಸ್ತೆಗಳು ಹಾಳಾಗುತ್ತಿವೆ. ಅನಾವಶ್ಯಕವಾಗಿ ಎಲ್ಲಂದರಲ್ಲಿ ಅಗೆಯುತ್ತಿರುವುದರಿಂದ ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಜೆಎಂ ಯೋಜನೆಯಡಿಯಲ್ಲಿ ಎಲ್ಲಿಯೂ ಕಾಮಗಾರಿ ಪೂರ್ಣಗೊಂಡಿಲ್ಲ. ಕಾಮಗಾರಿಗೆ ವೇಗ ನೀಡಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.</p>.<p>ಯಮರೆ ಗ್ರಾಮ ಪಂಚಾಯಿತಿಯ ಆಡಳಿತ ಅಧಿಕಾರಿ ಪ್ರಶಾಂತ್ ಖಾನಗೌಡ ಪಾಟೀಲ್ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಕ್ಷಕರಿಗೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ, ಪೌರಕಾರ್ಮಿಕರು ಮತ್ತು ಗ್ರಾಮ ಪಂಚಾಯಿತಿಯ ಕಚೇರಿಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.</p>.<p>ಸಿಡಿಪಿಒ ಮಹೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರವೀಣ್, ಕಾರ್ಯದರ್ಶಿ ಪ್ರಸಾದ್, ನಾರಾಯಣಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-15-334814697</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>