ಕಣಗಲೆ ಪುಷ್ಪವನ್ನು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಣ್ಣು ದೇವತೆಗಳ ಧಾರ್ಮಿಕ ಆಚರಣೆಯಲ್ಲಿ ದೀಪಾರತಿ ಅಲಂಕಾರಕ್ಕಾಗಿ ಬಳಸುತ್ತಾರೆ. ಎಲೆ –ಹೂವು ಕಾಂಡಾ ವಿಷಕಾರಿಯಾಗಿರುವುದರಿಂದ ಸಾಕು ಪ್ರಾಣಿಗಳು ಹತ್ತಿರ ಸುಳಿಯುವುದಿಲ್ಲ. ಕೆಲವಡೆ ವಿಷಕಾರಿ ಹಾವು, ಕ್ರಿಮಿಕೀಟ ಬಾರದಿರಲಿ ಎಂದು ಈ ಹೂವಿನ ಗಿಡಗಳನ್ನು ಬೆಳೆಸುತ್ತಾರೆ. ಈ ಎರಡು ಜಾತಿ ಸಸ್ಯದ ಕಾಂಡಾ ಕತ್ತರಿಸಿ ನಾಟಿ ಮಾಡಿ ಬೆಳೆಸಿಕೊಳ್ಳಬಹುದಾಗಿದೆ. ಕಣಗಲೆ ಎಲೆ ರಸ ಮತ್ತು ಎಲೆ ಕಿತ್ತ ನಂತರ ಹೊರಬರುವ ಅಂಟುದ್ರವ ಗಾಯಗಳಿಗೆ ರಾಮಬಾಣ ಎನ್ನುತ್ತಾರೆ ನಾಟಿ ವೈದ್ಯ ವೆಂಕಟರಾಜು.