<p><strong>ದೇವನಹಳ್ಳಿ:</strong> ದೀಪಾವಳಿ ಸಂದರ್ಭದಲ್ಲಿ ವಾಯುಮಾಲಿನ್ಯ ತಡೆಗಟ್ಟಲು ಪರಿಸರಸ್ನೇಹಿ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪಟಾಕಿ ಮಾರಾಟ ಸುರಕ್ಷತಾ ಸಭೆಯಲ್ಲಿ ಮಾತನಾಡಿದ ಅವರು, ಹಸಿರು ಪಟಾಕಿ ಬಿಟ್ಟು ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.</p>.<p>ಪಟಾಕಿ ಮಾರಾಟಗಾರರು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಸುರಕ್ಷತಾ ಕ್ರಮ ಅನುಸರಿಸಿದರೆ ಮಾತ್ರ ಪರವಾನಗಿ ನೀಡಲಾಗುವುದು ಎಂದರು. </p>.<p>ಜಿಲ್ಲೆಯಲ್ಲಿ ಹಸಿರು ಪಟಾಕಿಯಲ್ಲದೆ ನಿಷೇಧಿತ ಪಟಾಕಿಗಳ ಉತ್ಪಾದನೆ, ದಾಸ್ತಾನು ಮತ್ತು ಮಾರಾಟ ಮಾಡುವಂತಿಲ್ಲ. ಮಳಿಗೆಗಳಲ್ಲಿ ಅನಧಿಕೃತವಾಗಿ ಪಟಾಕಿ ದಾಸ್ತಾನು ಮಾಡಿಕೊಳ್ಳುವಂತಿಲ್ಲ. ಒಂದು ವೇಳೆ ಆ ರೀತಿ ಮಾಡಿದರೆ ಇಡೀ ಗೋದಾಮು ಮುಟ್ಟುಗೋಲು ಹಾಕಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಪಟಾಕಿ ದಾಸ್ತಾನು, ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡುವ ಮುನ್ನ ಪೊಲೀಸರು ಎಲ್ಲ ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸಬೇಕು. ಪಟಾಕಿ ದುರಂತ ಸಂಭವಿಸದಂತೆ ಪಟಾಕಿ ಮಾರಾಟಗಾರರು ಹಾಗೂ ಅಧಿಕಾರಿಗಳು ಮುಂಜಾಗ್ರತಾ ಹಾಗೂ ಸುರಕ್ಷತಾ ಕ್ರಮ ವಹಿಸಬೇಕು ಎಂದು ಸಲಹೆ ಮಾಡಿದರು. </p>.<p>ಹಬ್ಬದ ಸಂದರ್ಭದಲ್ಲಿ ರಾತ್ರಿ 8ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಿದೆ. </p>.<p>ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಡಿವೈಎಸ್ಪಿ ರವಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ದೀಪಾವಳಿ ಸಂದರ್ಭದಲ್ಲಿ ವಾಯುಮಾಲಿನ್ಯ ತಡೆಗಟ್ಟಲು ಪರಿಸರಸ್ನೇಹಿ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪಟಾಕಿ ಮಾರಾಟ ಸುರಕ್ಷತಾ ಸಭೆಯಲ್ಲಿ ಮಾತನಾಡಿದ ಅವರು, ಹಸಿರು ಪಟಾಕಿ ಬಿಟ್ಟು ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.</p>.<p>ಪಟಾಕಿ ಮಾರಾಟಗಾರರು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಸುರಕ್ಷತಾ ಕ್ರಮ ಅನುಸರಿಸಿದರೆ ಮಾತ್ರ ಪರವಾನಗಿ ನೀಡಲಾಗುವುದು ಎಂದರು. </p>.<p>ಜಿಲ್ಲೆಯಲ್ಲಿ ಹಸಿರು ಪಟಾಕಿಯಲ್ಲದೆ ನಿಷೇಧಿತ ಪಟಾಕಿಗಳ ಉತ್ಪಾದನೆ, ದಾಸ್ತಾನು ಮತ್ತು ಮಾರಾಟ ಮಾಡುವಂತಿಲ್ಲ. ಮಳಿಗೆಗಳಲ್ಲಿ ಅನಧಿಕೃತವಾಗಿ ಪಟಾಕಿ ದಾಸ್ತಾನು ಮಾಡಿಕೊಳ್ಳುವಂತಿಲ್ಲ. ಒಂದು ವೇಳೆ ಆ ರೀತಿ ಮಾಡಿದರೆ ಇಡೀ ಗೋದಾಮು ಮುಟ್ಟುಗೋಲು ಹಾಕಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಪಟಾಕಿ ದಾಸ್ತಾನು, ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡುವ ಮುನ್ನ ಪೊಲೀಸರು ಎಲ್ಲ ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸಬೇಕು. ಪಟಾಕಿ ದುರಂತ ಸಂಭವಿಸದಂತೆ ಪಟಾಕಿ ಮಾರಾಟಗಾರರು ಹಾಗೂ ಅಧಿಕಾರಿಗಳು ಮುಂಜಾಗ್ರತಾ ಹಾಗೂ ಸುರಕ್ಷತಾ ಕ್ರಮ ವಹಿಸಬೇಕು ಎಂದು ಸಲಹೆ ಮಾಡಿದರು. </p>.<p>ಹಬ್ಬದ ಸಂದರ್ಭದಲ್ಲಿ ರಾತ್ರಿ 8ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಿದೆ. </p>.<p>ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಡಿವೈಎಸ್ಪಿ ರವಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>