<p><strong>ಚಂದಾಪುರ (ಆನೇಕಲ್): </strong>ಚಂದಾಪುರ ಪುರಸಭೆ ವ್ಯಾಪ್ತಿಯ ಹೀಲಲಿಗೆ ಗ್ರಾಮದ ಮುಖ್ಯರಸ್ತೆ ಕಾಮಗಾರಿಗೆ ಶಾಸಕ ಬಿ.ಶಿವಣ್ಣ ಮತ್ತು ಚಂದಾಪುರ ಪುರಸಭೆ ಅಧ್ಯಕ್ಷೆ ಶಾರದ ವರದರಾಜು ಬುಧವಾರ ಭೂಮಿಪೂಜೆ ನೆರವೇರಿಸಿದರು.</p>.<p>ಶಾಸಕ ಬಿ.ಶಿವಣ್ಣ ಮಾತನಾಡಿ, ಹೀಲಲಿಗೆ ಮುಖ್ಯ ರಸ್ತೆಯು ಹುಸ್ಕೂರು ಮದ್ದೂರಮ್ಮ ದೇವಾಲಯದ ರಸ್ತೆಯಾಗಿದೆ. ಕೆಲವೇ ದಿನಗಳಲ್ಲಿ ಮದ್ದೂರಮ್ಮ ಜಾತ್ರೆ ನಡೆಯಲಿದೆ. ಜಾತ್ರೆಗೆ ಬರುವ ಭಕ್ತರಿಗೆ ತೊಂದರೆಯಾಗದಂತೆ ಮುಖ್ಯರಸ್ತೆಗಳ ಡಾಂಬರೀಕರಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.</p>.<p>ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ಗುಂಡಿ ಬಿದ್ದಿದ್ದು ಹಂತ ಹಂತವಾಗಿ ಅಭಿವೃದ್ಧಿಗೆ ಕ್ರಮ ವಹಿಸಲಾಗುತ್ತಿದೆ. ಚಂದಾಪುರ-ಆನೇಕಲ್ ಮುಖ್ಯ ರಸ್ತೆಯ ಕಾಮಗಾರಿ ಶೇ 85ರಷ್ಟು ಮುಗಿದಿದೆ. ಉಳಿದ ಕಾಮಗಾರಿಗೆ ವೇಗ ನೀಡುವಂತೆ ಸೂಚಿಸಲಾಗಿದೆ. ಚಂದಾಪುರ-ದೊಮ್ಮಸಂದ್ರ, ಸಿಂಗೇನ ಅಗ್ರಹಾರ ರಸ್ತೆಗಳ ಡಾಂಬರೀಕರಣ ಕಾರ್ಯಕ್ಕೂ ವೇಗ ನೀಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.</p>.<p>ಚಂದಾಪುರ ಪುರಸಭೆ ಅಧ್ಯಕ್ಷೆ ಶಾರದ ವರದರಾಜು ಮಾತನಾಡಿ, ಮುಖ್ಯರಸ್ತೆ ಹದಗೆಟ್ಟಿದ್ದರಿಂದ ವಾಹನ ದಟ್ಟಣೆ ಹೆಚ್ಚಾಗಿತ್ತು. ಹೀಲಲಿಗೆ ಮುಖ್ಯರಸ್ತೆ ಅಭಿವೃದ್ಧಿಗೊಳ್ಳುವುದರಿಂದ ಚಂದಾಪುರದಲ್ಲಿನ ವಾಹನಗಳ ಒತ್ತಡ ಕಡಿಮೆಯಾಗುತ್ತದೆ. ಚಂದಾಪುರ ಪೊಲೀಸರು ರಸ್ತೆ ದಟ್ಟಣೆ ಬಗ್ಗೆ ನಿಗಾವಹಿಸುವ ಅವಶ್ಯಕತೆ ಇದೆ ಎಂದರು.</p>.<p>ಪುರಸಭೆ ಉಪಾಧ್ಯಕ್ಷೆ ಮಂಜುಳ, ಕೃಷ್ಣಾರೆಡ್ಡಿ, ಸುಕನ್ಯಾ ವೇಣುಗೋಪಾಲ್, ಉಮೇಶ್, ರಮೇಶ್, ಶಿವಮ್ಮ, ರಮೇಶ್, ಪ್ರಕಾಶ್, ಲೋಕೇಶ್, ಮಂಜುನಾಥರೆಡ್ಡಿ, ಗೋಪಾಲರೆಡ್ಡಿ, ಡೈರಿ ಚಂದ್ರಾರೆಡ್ಡಿ, ಮಂಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂದಾಪುರ (ಆನೇಕಲ್): </strong>ಚಂದಾಪುರ ಪುರಸಭೆ ವ್ಯಾಪ್ತಿಯ ಹೀಲಲಿಗೆ ಗ್ರಾಮದ ಮುಖ್ಯರಸ್ತೆ ಕಾಮಗಾರಿಗೆ ಶಾಸಕ ಬಿ.ಶಿವಣ್ಣ ಮತ್ತು ಚಂದಾಪುರ ಪುರಸಭೆ ಅಧ್ಯಕ್ಷೆ ಶಾರದ ವರದರಾಜು ಬುಧವಾರ ಭೂಮಿಪೂಜೆ ನೆರವೇರಿಸಿದರು.</p>.<p>ಶಾಸಕ ಬಿ.ಶಿವಣ್ಣ ಮಾತನಾಡಿ, ಹೀಲಲಿಗೆ ಮುಖ್ಯ ರಸ್ತೆಯು ಹುಸ್ಕೂರು ಮದ್ದೂರಮ್ಮ ದೇವಾಲಯದ ರಸ್ತೆಯಾಗಿದೆ. ಕೆಲವೇ ದಿನಗಳಲ್ಲಿ ಮದ್ದೂರಮ್ಮ ಜಾತ್ರೆ ನಡೆಯಲಿದೆ. ಜಾತ್ರೆಗೆ ಬರುವ ಭಕ್ತರಿಗೆ ತೊಂದರೆಯಾಗದಂತೆ ಮುಖ್ಯರಸ್ತೆಗಳ ಡಾಂಬರೀಕರಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.</p>.<p>ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ಗುಂಡಿ ಬಿದ್ದಿದ್ದು ಹಂತ ಹಂತವಾಗಿ ಅಭಿವೃದ್ಧಿಗೆ ಕ್ರಮ ವಹಿಸಲಾಗುತ್ತಿದೆ. ಚಂದಾಪುರ-ಆನೇಕಲ್ ಮುಖ್ಯ ರಸ್ತೆಯ ಕಾಮಗಾರಿ ಶೇ 85ರಷ್ಟು ಮುಗಿದಿದೆ. ಉಳಿದ ಕಾಮಗಾರಿಗೆ ವೇಗ ನೀಡುವಂತೆ ಸೂಚಿಸಲಾಗಿದೆ. ಚಂದಾಪುರ-ದೊಮ್ಮಸಂದ್ರ, ಸಿಂಗೇನ ಅಗ್ರಹಾರ ರಸ್ತೆಗಳ ಡಾಂಬರೀಕರಣ ಕಾರ್ಯಕ್ಕೂ ವೇಗ ನೀಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.</p>.<p>ಚಂದಾಪುರ ಪುರಸಭೆ ಅಧ್ಯಕ್ಷೆ ಶಾರದ ವರದರಾಜು ಮಾತನಾಡಿ, ಮುಖ್ಯರಸ್ತೆ ಹದಗೆಟ್ಟಿದ್ದರಿಂದ ವಾಹನ ದಟ್ಟಣೆ ಹೆಚ್ಚಾಗಿತ್ತು. ಹೀಲಲಿಗೆ ಮುಖ್ಯರಸ್ತೆ ಅಭಿವೃದ್ಧಿಗೊಳ್ಳುವುದರಿಂದ ಚಂದಾಪುರದಲ್ಲಿನ ವಾಹನಗಳ ಒತ್ತಡ ಕಡಿಮೆಯಾಗುತ್ತದೆ. ಚಂದಾಪುರ ಪೊಲೀಸರು ರಸ್ತೆ ದಟ್ಟಣೆ ಬಗ್ಗೆ ನಿಗಾವಹಿಸುವ ಅವಶ್ಯಕತೆ ಇದೆ ಎಂದರು.</p>.<p>ಪುರಸಭೆ ಉಪಾಧ್ಯಕ್ಷೆ ಮಂಜುಳ, ಕೃಷ್ಣಾರೆಡ್ಡಿ, ಸುಕನ್ಯಾ ವೇಣುಗೋಪಾಲ್, ಉಮೇಶ್, ರಮೇಶ್, ಶಿವಮ್ಮ, ರಮೇಶ್, ಪ್ರಕಾಶ್, ಲೋಕೇಶ್, ಮಂಜುನಾಥರೆಡ್ಡಿ, ಗೋಪಾಲರೆಡ್ಡಿ, ಡೈರಿ ಚಂದ್ರಾರೆಡ್ಡಿ, ಮಂಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>