ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಶೇ 60ರಷ್ಟು ರಾಗಿ, ಮುಸುಕಿನ ಜೋಳ, ತೊಗರಿ ಬಿತ್ತನೆಯಾಗಿದೆ. ಎರಡನೇ ಹಂತದಲ್ಲಿ ಶೇ 40 ರಷ್ಟು ಬಿತ್ತನೆಯಾಗಿದೆ. ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆಯ ಒಟ್ಟು ಗುರಿ 60.403 ಸಾವಿರ ಹೆಕ್ಟೇರ್ ಪೈಕಿ ಶೇ 80ರಷ್ಟು ಬಿತ್ತನೆ ಆಗಿದೆ ಎನ್ನುತ್ತಾರೆ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜೀವ ಸುಲೋಚನಾ.