<p><strong>ದೇವನಹಳ್ಳಿ:</strong> ಪಟ್ಟಣದ ಪ್ರಶಾಂತ ನಗರದಲ್ಲಿರುವ ಡಿಆರ್ಎನ್ ಬಡಾವಣೆಯಲ್ಲಿ ಗುರುವಾರ 50ನೇ ವರ್ಷದ ಗುರು ಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.</p>.<p>ಶಿರಡಿ ಸಾಯಿಬಾಬಾ, ಪುಟ್ಟಪರ್ತಿ ಸಾಯಿಬಾಬಾ, ಕೈವಾರ ತಾತಯ್ಯ, ರಮಣ ಮಹರ್ಷಿ, ದತ್ತಾತ್ರೇಯ, ಮಡಿಕೆ ಸ್ವಾಮಿಗಳ ಮೂರ್ತಿ ಹಾಗೂ ಭಾವಚಿತ್ರಗಳಿಗೆ ವಿವಿಧ ಪುಷ್ಟಗಳಿಂದ ಅಲಂಕರಿಸಲಾಗಿತ್ತು. ತಾಲ್ಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರು ಭಜನೆ, ಹಾಡುಗಳ ಮೂಲಕ ಭಕ್ತಿ ಸಾಗರದಲ್ಲಿ ಮಿಂದೆದ್ದರು.</p>.<p>ಸುಮಾರು ಎರಡೂವರೆ ಸಾವಿರಕ್ಕೂ ಹೆಚ್ಚು ಭಕ್ತರು ಗುರುಗಳ ದರ್ಶನ ಪಡೆದರು. ಪ್ರಸಾದ ವಿನಿಯೋಗ ವ್ಯವಸ್ಥೆ ಕಲ್ಪಿಸಲಾಗಿತ್ತು. </p>.<p>50 ವರ್ಷದ ಹಿಂದೆ ಹಿರಿಯರು ನಾಲ್ವರು ಭಕ್ತರೊಂದಿಗೆ ಬೆಂಗಳೂರಿನಲ್ಲಿ ಆರಂಭಿಸಿದ ಗುರು ಪೂರ್ಣಿಮೆ ಕಾರ್ಯಕ್ರಮ ಕೋವಿಡ್ ನಂತರ ನಾಲ್ಕು ವರ್ಷಗಳಿಂದ ಪಟ್ಟಣದ ಡಿಆರ್ಎನ್ ಬಡಾವಣೆಯಲ್ಲಿ ನಡೆಯುತ್ತಿದೆ ಎಂದು ಆಯೋಜಕ ಎನ್.ಸಾಯಿ ಕುಮಾರ್ ತಿಳಿಸಿದರು.</p>.<p>ಮುನಿರಾಜು, ಶ್ರೀನಿವಾಸ್, ಚಂದ್ರ ಶೇಖರ್, ಚಂದ್ರಶೇಖರ್, ಕೃಷ್ಣ, ಅಭಿಲಾಷ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಪಟ್ಟಣದ ಪ್ರಶಾಂತ ನಗರದಲ್ಲಿರುವ ಡಿಆರ್ಎನ್ ಬಡಾವಣೆಯಲ್ಲಿ ಗುರುವಾರ 50ನೇ ವರ್ಷದ ಗುರು ಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.</p>.<p>ಶಿರಡಿ ಸಾಯಿಬಾಬಾ, ಪುಟ್ಟಪರ್ತಿ ಸಾಯಿಬಾಬಾ, ಕೈವಾರ ತಾತಯ್ಯ, ರಮಣ ಮಹರ್ಷಿ, ದತ್ತಾತ್ರೇಯ, ಮಡಿಕೆ ಸ್ವಾಮಿಗಳ ಮೂರ್ತಿ ಹಾಗೂ ಭಾವಚಿತ್ರಗಳಿಗೆ ವಿವಿಧ ಪುಷ್ಟಗಳಿಂದ ಅಲಂಕರಿಸಲಾಗಿತ್ತು. ತಾಲ್ಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ಭಕ್ತರು ಭಜನೆ, ಹಾಡುಗಳ ಮೂಲಕ ಭಕ್ತಿ ಸಾಗರದಲ್ಲಿ ಮಿಂದೆದ್ದರು.</p>.<p>ಸುಮಾರು ಎರಡೂವರೆ ಸಾವಿರಕ್ಕೂ ಹೆಚ್ಚು ಭಕ್ತರು ಗುರುಗಳ ದರ್ಶನ ಪಡೆದರು. ಪ್ರಸಾದ ವಿನಿಯೋಗ ವ್ಯವಸ್ಥೆ ಕಲ್ಪಿಸಲಾಗಿತ್ತು. </p>.<p>50 ವರ್ಷದ ಹಿಂದೆ ಹಿರಿಯರು ನಾಲ್ವರು ಭಕ್ತರೊಂದಿಗೆ ಬೆಂಗಳೂರಿನಲ್ಲಿ ಆರಂಭಿಸಿದ ಗುರು ಪೂರ್ಣಿಮೆ ಕಾರ್ಯಕ್ರಮ ಕೋವಿಡ್ ನಂತರ ನಾಲ್ಕು ವರ್ಷಗಳಿಂದ ಪಟ್ಟಣದ ಡಿಆರ್ಎನ್ ಬಡಾವಣೆಯಲ್ಲಿ ನಡೆಯುತ್ತಿದೆ ಎಂದು ಆಯೋಜಕ ಎನ್.ಸಾಯಿ ಕುಮಾರ್ ತಿಳಿಸಿದರು.</p>.<p>ಮುನಿರಾಜು, ಶ್ರೀನಿವಾಸ್, ಚಂದ್ರ ಶೇಖರ್, ಚಂದ್ರಶೇಖರ್, ಕೃಷ್ಣ, ಅಭಿಲಾಷ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>