ಈ ನಡುವೆ ಶಿವಕುಮಾರ್ ನಾನು ಪ್ರೀತಿಸುತ್ತಿದ್ದ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿಟ್ಟುಕೊಳ್ಳಲು ಮುಂದಾಗಿದ್ದ. ಈ ವಿಚಾರ ತಿಳಿದು ಹಲವು ಬಾರಿ ನನ್ನ ಹುಡುಗಿಯ ತಂಟೆಗೆ ಬರಬೇಡ ಎಂದು ಬುದ್ಧಿವಾದ ಹೇಳಿದ್ದೆ. ಆದರೂ ಆತ ಕೇಳಿರಲಿಲ್ಲ. ಹಾಗಾಗಿ, ಕೊಲೆ ಮಾಡಿದೆ ಎಂದು ಪೊಲೀಸರ ಮುಂದೆ ಆರೋಪಿ ತಪ್ಪಿಕೊಂಡಿದ್ದಾನೆ. ಈ ಸಂಬಂಧ ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.