ಆನೇಕಲ್: ‘ಅತ್ತಿಬೆಲೆಗೆ ಮೆಟ್ರೊ ರೈಲು ತರುವ ಸಂಬಂಧ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಈ ಭಾಗದ ಜನರಿಗೆ ಅನುಕೂಲ ಮಾಡುವ ಉದ್ದೇಶ ನಮ್ಮದಾಗಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಜನತಾ ಜಲಧಾರೆ ಕಾರ್ಯಕ್ರಮ ದಲ್ಲಿ ಮಾತನಾಡಿ, ‘ರಾಜ್ಯದಲ್ಲಿ ತೆರಿಗೆ ಹಣ ಲೂಟಿಯಾಗುತ್ತಿದೆ. ಶೇ 40ರಷ್ಟು ಕಮಿಷನ್ ಬಗ್ಗೆ ಚರ್ಚೆಯಾಗುತ್ತಿದೆ. ರಾಷ್ಟ್ರೀಯ ಪಕ್ಷಗಳು ಪರಸ್ಪರ ಕೆಸರೆರಚಾಟ ನಡೆಸುತ್ತಿವೆ’ ಎಂದು ಅವರು ತಿಳಿಸಿದರು.