<p><strong>ವಿಜಯಪುರ (ದೇವನಹಳ್ಳಿ):</strong> ಹನುಮ ಜಯಂತಿ ಪ್ರಯುಕ್ತ ಮಂಗಳವಾರ ಪಟ್ಟಣ ಮತ್ತು ಗ್ರಾಮೀಣ ಭಾಗದ ವಿವಿಧ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಧಾರ್ಮಿಕ ಕೈಂಕರ್ಯಗಳು ಶ್ರದ್ಧಾ,ಭಕ್ತಿಯಿಂದ ಜರುಗಿದವು. ನೂರಾರು ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.</p>.<p>ಪಟ್ಟಣದ ದೇವನಹಳ್ಳಿ ರಸ್ತೆಯ ಅಭಯ ವೀರಾಂಜನೇಯ, ಆನೆಛತ್ರದ ಬಳಿಯ ವೀರಾಂಜನೇಯ, ಕೆರೆಕೋಡಿ ಬಳಿಯ ಪಂಚಮುಖಿ ಆಂಜನೇಯ, ಬೈಪಾಸ್ ರಸ್ತೆಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ನಡೆಯಿತು.</p>.<p>ಆಂಜನೇಯ ದೇವರ ಮೂರ್ತಿಗಳಿಗೆ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ದೇಗುಲದಲ್ಲಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ, ಭಕ್ತಿ ಸಂಗೀತ ಕಾರ್ಯಕ್ರಮಗಳು ನಡೆದವು.</p>.<p>ಹೋಬಳಿಯ ವೆಂಕಟೇನಹಳ್ಳಿ, ಪುರ, ಕೊಮ್ಮಸಂದ್ರ, ಗೊಡ್ಲುಮುದ್ದೇನಹಳ್ಳಿ, ಯಲುವಹಳ್ಳಿ, ಧರ್ಮಪುರ, ಮಂಡಿಬಲೆ, ಗಡ್ಡದನಾಯಕನಹಳ್ಳಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಪೂಜಾ ಕಾರ್ಯಗಳು ನಡೆದವು.</p>.<p>ಭಕ್ತ ಗಣ ಬೆಳಿಗ್ಗೆಯಿಂದಲೇ ಹನುಮ ದೇಗುಲಗಳಿಗೆ ಭೇಟಿ ನೀಡಿ ಸರದಿ ಸಾಲಿನಲ್ಲಿ ನಿಂತು ದೇವರಿಗೆ ಅರಿಶಿಣ-ಕುಂಕುಮ, ಎಲೆ, ಅಡಿಕೆ, ಕಾಯಿ ಅರ್ಪಿಸಿ ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ಪ್ರಾರ್ಥನೆ ಸಲ್ಲಿಸಿದರು. ಭಜನೆ ಮೂಲಕ ವಾಯುಪುತ್ರನ ಸ್ಮರಿಸಿದರು.</p>.<p>ಸಂಜೆ ಭಕ್ತಿಗೀತೆಗಳ ಗಾಯನ ಏರ್ಪಡಿಸಲಾಗಿತ್ತು. ದೇಗುಲಗಳಲ್ಲಿ ತೀರ್ಥ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ನೂರಾರು ಭಕ್ತರು ಬಂದು ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ (ದೇವನಹಳ್ಳಿ):</strong> ಹನುಮ ಜಯಂತಿ ಪ್ರಯುಕ್ತ ಮಂಗಳವಾರ ಪಟ್ಟಣ ಮತ್ತು ಗ್ರಾಮೀಣ ಭಾಗದ ವಿವಿಧ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಅಲಂಕಾರ, ಧಾರ್ಮಿಕ ಕೈಂಕರ್ಯಗಳು ಶ್ರದ್ಧಾ,ಭಕ್ತಿಯಿಂದ ಜರುಗಿದವು. ನೂರಾರು ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.</p>.<p>ಪಟ್ಟಣದ ದೇವನಹಳ್ಳಿ ರಸ್ತೆಯ ಅಭಯ ವೀರಾಂಜನೇಯ, ಆನೆಛತ್ರದ ಬಳಿಯ ವೀರಾಂಜನೇಯ, ಕೆರೆಕೋಡಿ ಬಳಿಯ ಪಂಚಮುಖಿ ಆಂಜನೇಯ, ಬೈಪಾಸ್ ರಸ್ತೆಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ನಡೆಯಿತು.</p>.<p>ಆಂಜನೇಯ ದೇವರ ಮೂರ್ತಿಗಳಿಗೆ ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ದೇಗುಲದಲ್ಲಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ, ಭಕ್ತಿ ಸಂಗೀತ ಕಾರ್ಯಕ್ರಮಗಳು ನಡೆದವು.</p>.<p>ಹೋಬಳಿಯ ವೆಂಕಟೇನಹಳ್ಳಿ, ಪುರ, ಕೊಮ್ಮಸಂದ್ರ, ಗೊಡ್ಲುಮುದ್ದೇನಹಳ್ಳಿ, ಯಲುವಹಳ್ಳಿ, ಧರ್ಮಪುರ, ಮಂಡಿಬಲೆ, ಗಡ್ಡದನಾಯಕನಹಳ್ಳಿ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಪೂಜಾ ಕಾರ್ಯಗಳು ನಡೆದವು.</p>.<p>ಭಕ್ತ ಗಣ ಬೆಳಿಗ್ಗೆಯಿಂದಲೇ ಹನುಮ ದೇಗುಲಗಳಿಗೆ ಭೇಟಿ ನೀಡಿ ಸರದಿ ಸಾಲಿನಲ್ಲಿ ನಿಂತು ದೇವರಿಗೆ ಅರಿಶಿಣ-ಕುಂಕುಮ, ಎಲೆ, ಅಡಿಕೆ, ಕಾಯಿ ಅರ್ಪಿಸಿ ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ಪ್ರಾರ್ಥನೆ ಸಲ್ಲಿಸಿದರು. ಭಜನೆ ಮೂಲಕ ವಾಯುಪುತ್ರನ ಸ್ಮರಿಸಿದರು.</p>.<p>ಸಂಜೆ ಭಕ್ತಿಗೀತೆಗಳ ಗಾಯನ ಏರ್ಪಡಿಸಲಾಗಿತ್ತು. ದೇಗುಲಗಳಲ್ಲಿ ತೀರ್ಥ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ನೂರಾರು ಭಕ್ತರು ಬಂದು ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>