<p><strong>ಚಿಕ್ಕಬಳ್ಳಾಪುರ:</strong> ನಗರದ ಬಿಬಿ ರಸ್ತೆಯ ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರದಿಂದ ₹2 ಲಕ್ಷ ಕಳ್ಳತನ ಮಾಡಿದ್ದ ಆರೋಪ ಮೇಲೆ ತ್ರಿಪುರ ಮೂಲದ ಬೆಂಗಳೂರು ವಾಸಿ ನಿಯಾಜ್ ಉದ್ದೀನ್ (20) ಎಂಬಾತನನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ₹15 ಸಾವಿರ ನಗದು ವಶಕ್ಕೆ ಪಡೆದಿದ್ದಾರೆ.</p><p>ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರದ ಬಾಗಿಲಿಗೆ ಆರೋಪಿ ಸಾಧನವೊಂದನ್ನು ಅಳವಡಿಸಿದ್ದ. ಗ್ರಾಹಕರು ಹಣವನ್ನು ಡ್ರಾ ಮಾಡಿದರೂ ಹಣ ಯಂತ್ರದಿಂದ ಹೊರಗೆ ಬರುತ್ತಿರಲಿಲ್ಲ. ಗ್ರಾಹಕರು ಸ್ಥಳದಿಂದ ತೆರಳಿದ ನಂತರ ಆ ಹಣವನ್ನು ಪಡೆಯುತ್ತಿದ್ದ. ಹೀಗೆ ಒಟ್ಟು ₹2 ಲಕ್ಷ ಕಳ್ಳತನ ಮಾಡಿದ್ದ. ಈ ಬಗ್ಗೆ ಬ್ಯಾಂಕಿನ ವ್ಯವಸ್ಥಾಪಕರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p><p>ಆರೋಪಿ ಪತ್ತೆಗೆ ಪೊಲೀಸರು ತಂಡ ರಚಿಸಿದ್ದರು. ನಿಯಾಜ್ ಉದ್ದೀನ್ ತ್ರಿಪುರ ರಾಜ್ಯದವನಾಗಿದ್ದು ಬೆಂಗಳೂರಿನ ಬೊಮ್ಮನಹಳ್ಳಿಯ ಅಪಾರ್ಟ್ಮೆಂಟ್ವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನಗರದ ಬಿಬಿ ರಸ್ತೆಯ ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರದಿಂದ ₹2 ಲಕ್ಷ ಕಳ್ಳತನ ಮಾಡಿದ್ದ ಆರೋಪ ಮೇಲೆ ತ್ರಿಪುರ ಮೂಲದ ಬೆಂಗಳೂರು ವಾಸಿ ನಿಯಾಜ್ ಉದ್ದೀನ್ (20) ಎಂಬಾತನನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ₹15 ಸಾವಿರ ನಗದು ವಶಕ್ಕೆ ಪಡೆದಿದ್ದಾರೆ.</p><p>ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರದ ಬಾಗಿಲಿಗೆ ಆರೋಪಿ ಸಾಧನವೊಂದನ್ನು ಅಳವಡಿಸಿದ್ದ. ಗ್ರಾಹಕರು ಹಣವನ್ನು ಡ್ರಾ ಮಾಡಿದರೂ ಹಣ ಯಂತ್ರದಿಂದ ಹೊರಗೆ ಬರುತ್ತಿರಲಿಲ್ಲ. ಗ್ರಾಹಕರು ಸ್ಥಳದಿಂದ ತೆರಳಿದ ನಂತರ ಆ ಹಣವನ್ನು ಪಡೆಯುತ್ತಿದ್ದ. ಹೀಗೆ ಒಟ್ಟು ₹2 ಲಕ್ಷ ಕಳ್ಳತನ ಮಾಡಿದ್ದ. ಈ ಬಗ್ಗೆ ಬ್ಯಾಂಕಿನ ವ್ಯವಸ್ಥಾಪಕರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p><p>ಆರೋಪಿ ಪತ್ತೆಗೆ ಪೊಲೀಸರು ತಂಡ ರಚಿಸಿದ್ದರು. ನಿಯಾಜ್ ಉದ್ದೀನ್ ತ್ರಿಪುರ ರಾಜ್ಯದವನಾಗಿದ್ದು ಬೆಂಗಳೂರಿನ ಬೊಮ್ಮನಹಳ್ಳಿಯ ಅಪಾರ್ಟ್ಮೆಂಟ್ವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>