<p><strong>ವಿಜಯಪುರ</strong>: ‘ಜೆಡಿಎಸ್ ಪಕ್ಷಕ್ಕೆ ಉತ್ತಮ ಭವಿಷ್ಯ ತಂದುಕೊಡುವಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಸಫಲರಾಗುತ್ತಾರೆ’ ಎಂದು ಜೆಡಿಎಸ್ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಅಶ್ವಥಪ್ಪ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪಟ್ಟಣದಲ್ಲಿ ಬುಧವಾರ ಜೆಡಿಎಸ್ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನ ಆಚರಣೆ ಮಾಡಿದ ಬಳಿಕ ಅವರು ಮಾತನಾಡಿದರು.</p>.<p>‘ಕುಮಾರಸ್ವಾಮಿ ಅವರ 20 ತಿಂಗಳ ಅಧಿಕಾರಾವಧಿಯಲ್ಲಿ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು ಇಂದಿಗೂ ಜನರ ಮನಸ್ಸಿನಲ್ಲಿವೆ. ಅವರೊಬ್ಬ ಉತ್ತಮ ನಾಯಕರಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಉತ್ತಮ ಚೇತರಿಕೆ ನೀಡಲಿದ್ದಾರೆ’ ಎಂದರು.</p>.<p>ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶಿವಪ್ಪ ಮಾತನಾಡಿ, ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಸಂಬಂಧ ಅವರು ಕೈಗೊಳ್ಳುತ್ತಿರುವ ಕೆಲವು ನಿರ್ಧಾರಗಳಲ್ಲಿ ಪಕ್ಷ ಹಾಗೂ ರೈತರ ಹಿತ ಅಡಗಿದೆ. ಈ ಬಗ್ಗೆ ಯಾರೂ ಬೇಸರ ಪಟ್ಟುಕೊಳ್ಳುವ ಅಗತ್ಯವಿಲ್ಲ ಎಂದರು.</p>.<p>ಮುಖಂಡರಾದ ಮಹೇಶ್ ಕುಮಾರ್, ಜೆ.ಆರ್. ಮುನಿವೀರಣ್ಣ, ಸಿ. ಮುನಿಯಪ್ಪ, ಹರೀಶ್, ಕೆ. ಮುನಿರಾಜು, ಟಿಪ್ಪು ಸಂಘದ ಟೌನ್ ಅಧ್ಯಕ್ಷ ಸಮೀರ್, ಲೋಕೇಶ್, ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ‘ಜೆಡಿಎಸ್ ಪಕ್ಷಕ್ಕೆ ಉತ್ತಮ ಭವಿಷ್ಯ ತಂದುಕೊಡುವಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಸಫಲರಾಗುತ್ತಾರೆ’ ಎಂದು ಜೆಡಿಎಸ್ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಅಶ್ವಥಪ್ಪ ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪಟ್ಟಣದಲ್ಲಿ ಬುಧವಾರ ಜೆಡಿಎಸ್ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನ ಆಚರಣೆ ಮಾಡಿದ ಬಳಿಕ ಅವರು ಮಾತನಾಡಿದರು.</p>.<p>‘ಕುಮಾರಸ್ವಾಮಿ ಅವರ 20 ತಿಂಗಳ ಅಧಿಕಾರಾವಧಿಯಲ್ಲಿ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು ಇಂದಿಗೂ ಜನರ ಮನಸ್ಸಿನಲ್ಲಿವೆ. ಅವರೊಬ್ಬ ಉತ್ತಮ ನಾಯಕರಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಉತ್ತಮ ಚೇತರಿಕೆ ನೀಡಲಿದ್ದಾರೆ’ ಎಂದರು.</p>.<p>ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶಿವಪ್ಪ ಮಾತನಾಡಿ, ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಸಂಬಂಧ ಅವರು ಕೈಗೊಳ್ಳುತ್ತಿರುವ ಕೆಲವು ನಿರ್ಧಾರಗಳಲ್ಲಿ ಪಕ್ಷ ಹಾಗೂ ರೈತರ ಹಿತ ಅಡಗಿದೆ. ಈ ಬಗ್ಗೆ ಯಾರೂ ಬೇಸರ ಪಟ್ಟುಕೊಳ್ಳುವ ಅಗತ್ಯವಿಲ್ಲ ಎಂದರು.</p>.<p>ಮುಖಂಡರಾದ ಮಹೇಶ್ ಕುಮಾರ್, ಜೆ.ಆರ್. ಮುನಿವೀರಣ್ಣ, ಸಿ. ಮುನಿಯಪ್ಪ, ಹರೀಶ್, ಕೆ. ಮುನಿರಾಜು, ಟಿಪ್ಪು ಸಂಘದ ಟೌನ್ ಅಧ್ಯಕ್ಷ ಸಮೀರ್, ಲೋಕೇಶ್, ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>