<p><strong>ದೇವನಹಳ್ಳಿ: </strong>‘ಒಂದು ಪ್ರದೇಶದ ಜನರ ಸರ್ವಾಂಗೀಣ ಅಭಿವೃದ್ಧಿಗೆ ಆರೋಗ್ಯ ಅತ್ಯಂತ ಅವಶ್ಯಕವಾಗಿದೆ. ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಸೂಕ್ತ ಕಾಳಜಿವಹಿಸಬೇಕು. ಹಲವು ರೋಗಗಳನ್ನು ಪ್ರಾರಂಭದಲ್ಲಿಯೇ ಗುರುತಿಸಿದರೆ ಗುಣಪಡಿಸಬಹುದು’ ಎಂದು ಮಾಜಿ ಶಾಸಕ ಕೆ. ವೆಂಕಟಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಅಣ್ಣೇಶ್ವರ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಬುಧವಾರ ಮಾನಸ ಆಸ್ಪತ್ರೆಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಮಾನವನಿಗೆ ಆಕಸ್ಮಿಕ ಸಂದರ್ಭಗಳಲ್ಲಿ ತುರ್ತಾಗಿ ಅಗತ್ಯವಾಗಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುತ್ತದೆ. ಇದನ್ನು ಅರಿತು ಸಮಾಜದ ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಮಾದರಿಯಾಗಬೇಕು. ರಕ್ತದಾನ ಮಾಡಿದರೆ ತಮ್ಮ ದೇಹದ ಕೊಬ್ಬಿನಾಂಶ ಕಡಿಮೆಯಾಗಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ ಎಂದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್ ಮಾತನಾಡಿ, ನಿರಂತರವಾಗಿ ಒತ್ತಡದಲ್ಲಿರುವವರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಗ್ರಾಮಾಂತರ ಪ್ರದೇಶದಲ್ಲಿ ಆಯೋಜನೆ ಮಾಡುವಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಮುಖ್ಯವಾಗಿ ಹೃದಯ ತಪಾಸಣೆ, ರಕ್ತದೊತ್ತಡ, ಮಧುಮೇಹದ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿ ದರು.</p>.<p>ಅಣ್ಣೇಶ್ವರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು, ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರ ಜೊತೆಗೆ ಯುವಕರು ರಕ್ತದಾನ ಮಾಡಿದರು.</p>.<p><strong>ತಪ್ಪಾಗಿ ಅರ್ಥೈಸಿಕೊಂಡ ಬಿಜೆಪಿ:</strong>ಸಿದ್ದರಾಮಯ್ಯ ಅವರಿಗೆ ದಲಿತರ ಬಗ್ಗೆ ಪ್ರೀತಿ ಇದ್ದಿದ್ದರಿಂದಲೇ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಮೊದಲು ಪರಿಶಿಷ್ಟರ ಸಾಲ ಮನ್ನಾ ಮಾಡಿದರು. ಅವರ ಅವಧಿಯಲ್ಲಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ 60ರಷ್ಟನ್ನು ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಮೀಸಲಿಟ್ಟಿದ್ದರು ಎಂದು ಮಾಜಿ ಶಾಸಕ ವೆಂಕಟಸ್ವಾಮಿ ಹೇಳಿದರು.</p>.<p>‘ಜನರಿಂದ ಆಯ್ಕೆಯಾಗಿರುವ ದಲಿತ ಜನಪ್ರತಿನಿಧಿಗಳು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆಂದು ಅವರು ಹೇಳಿದ್ದಾರೆ. ಇದನ್ನು ಬಿಜೆಪಿಯವರು ತಪ್ಪಾಗಿ ಅರ್ಥೈಸಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯಲು ಪ್ರಯತ್ನ ಮಾಡುತ್ತಿದ್ದಾರೆ. ದಲಿತರ ಪರವಾಗಿರುವವರು ಯಾರು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ’ ಎಂದು ಹೇಳಿದರು.</p>.<p>ವಿ. ರಾಮಚಂದ್ರಪ್ಪ, ಚಂದ್ರಶೇಖರ್, ಮುನಿರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>‘ಒಂದು ಪ್ರದೇಶದ ಜನರ ಸರ್ವಾಂಗೀಣ ಅಭಿವೃದ್ಧಿಗೆ ಆರೋಗ್ಯ ಅತ್ಯಂತ ಅವಶ್ಯಕವಾಗಿದೆ. ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಸೂಕ್ತ ಕಾಳಜಿವಹಿಸಬೇಕು. ಹಲವು ರೋಗಗಳನ್ನು ಪ್ರಾರಂಭದಲ್ಲಿಯೇ ಗುರುತಿಸಿದರೆ ಗುಣಪಡಿಸಬಹುದು’ ಎಂದು ಮಾಜಿ ಶಾಸಕ ಕೆ. ವೆಂಕಟಸ್ವಾಮಿ ಹೇಳಿದರು.</p>.<p>ತಾಲ್ಲೂಕಿನ ಅಣ್ಣೇಶ್ವರ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಬುಧವಾರ ಮಾನಸ ಆಸ್ಪತ್ರೆಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಮಾನವನಿಗೆ ಆಕಸ್ಮಿಕ ಸಂದರ್ಭಗಳಲ್ಲಿ ತುರ್ತಾಗಿ ಅಗತ್ಯವಾಗಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುತ್ತದೆ. ಇದನ್ನು ಅರಿತು ಸಮಾಜದ ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಮಾದರಿಯಾಗಬೇಕು. ರಕ್ತದಾನ ಮಾಡಿದರೆ ತಮ್ಮ ದೇಹದ ಕೊಬ್ಬಿನಾಂಶ ಕಡಿಮೆಯಾಗಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ ಎಂದರು.</p>.<p>ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್ ಮಾತನಾಡಿ, ನಿರಂತರವಾಗಿ ಒತ್ತಡದಲ್ಲಿರುವವರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಗ್ರಾಮಾಂತರ ಪ್ರದೇಶದಲ್ಲಿ ಆಯೋಜನೆ ಮಾಡುವಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಮುಖ್ಯವಾಗಿ ಹೃದಯ ತಪಾಸಣೆ, ರಕ್ತದೊತ್ತಡ, ಮಧುಮೇಹದ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿ ದರು.</p>.<p>ಅಣ್ಣೇಶ್ವರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು, ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರ ಜೊತೆಗೆ ಯುವಕರು ರಕ್ತದಾನ ಮಾಡಿದರು.</p>.<p><strong>ತಪ್ಪಾಗಿ ಅರ್ಥೈಸಿಕೊಂಡ ಬಿಜೆಪಿ:</strong>ಸಿದ್ದರಾಮಯ್ಯ ಅವರಿಗೆ ದಲಿತರ ಬಗ್ಗೆ ಪ್ರೀತಿ ಇದ್ದಿದ್ದರಿಂದಲೇ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಮೊದಲು ಪರಿಶಿಷ್ಟರ ಸಾಲ ಮನ್ನಾ ಮಾಡಿದರು. ಅವರ ಅವಧಿಯಲ್ಲಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ 60ರಷ್ಟನ್ನು ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಮೀಸಲಿಟ್ಟಿದ್ದರು ಎಂದು ಮಾಜಿ ಶಾಸಕ ವೆಂಕಟಸ್ವಾಮಿ ಹೇಳಿದರು.</p>.<p>‘ಜನರಿಂದ ಆಯ್ಕೆಯಾಗಿರುವ ದಲಿತ ಜನಪ್ರತಿನಿಧಿಗಳು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆಂದು ಅವರು ಹೇಳಿದ್ದಾರೆ. ಇದನ್ನು ಬಿಜೆಪಿಯವರು ತಪ್ಪಾಗಿ ಅರ್ಥೈಸಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯಲು ಪ್ರಯತ್ನ ಮಾಡುತ್ತಿದ್ದಾರೆ. ದಲಿತರ ಪರವಾಗಿರುವವರು ಯಾರು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ’ ಎಂದು ಹೇಳಿದರು.</p>.<p>ವಿ. ರಾಮಚಂದ್ರಪ್ಪ, ಚಂದ್ರಶೇಖರ್, ಮುನಿರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>