<p><strong>ಕುದೂರು</strong>: ಪಟ್ಟಣ ಸೇರಿದಂತೆ ಹೋಬಳಿಯಾದ್ಯಂತ ಶನಿವಾರ ಸಂಜೆ ಧಾರಾಕಾರವಾಗಿ ಮಳೆ ಸುರಿಯಿತು.</p>.<p>ಸಂಜೆ 4:30ರ ಸುಮಾರಿಗೆ ಸಣ್ಣದಾಗಿ ಹನಿ ತೊಡಗಿದ ಮಳೆ ನಂತರ ಜೋರಾಗಿ ಒಂದೂವರೆ ಗಂಟೆ ಸುರಿಯಿತು.</p>.<p>ಪಟ್ಟಣದ ಸಂತೆ ಸರ್ಕಲ್ ಬಳಿ ಮಳೆ ನೀರು ಸರಾಗವಾಗಿ ಹರಿಯದ ಕಾರಣ ಗುಂಡಿಗಳಲ್ಲಿ ನೀರು ತುಂಬಿ ವಾಹನ ಸವಾರರು ತೊಂದರೆ ಅನುಭವಿಸಿದರು.</p>.<p>ಕೆಲ ದಿನಗಳ ಬಿಡುವಿನ ಬಳಿಕ ಸುರಿದ ಮಳೆಗೆ ರೈತಾಪಿ ವರ್ಗ ಸಂತಸ ಪಟ್ಟಿತು. ಮುಂಗಾರು ಕೃಷಿ ಚಟುವಟಿಕೆಗಳಿಗೆ ಮಳೆ ಪೂರಕವಾಗಿದೆ. ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಅನುಕೂಲವಾಗಿದೆ ಎಂದು ರೈತ ಬೀಚನಹಳ್ಳಿ ನರಸಿಂಹಮೂರ್ತಿ ತಿಳಿಸಿದರು.</p>.<p><strong>ಎಚ್ಚೆತ್ತುಕೊಳ್ಳದ</strong> <strong>ಪಂಚಾಯಿತಿ</strong>: ಮಳೆಗಾಲ ಶುರುವಾದರೂ ಪಟ್ಟಣದ ಕೆಲ ಚರಂಡಿ ಹಾಗೂ ರಾಜಕಾಲುವೆ ಹೂಳು ಸ್ವಚ್ಛಗೊಳಿಸಿಲ್ಲ. ಈ ಕುರಿತು ‘ಪ್ರಜಾವಾಣಿ’ಯಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು. ಈ ಕುರಿತು ಜಿಲ್ಲಾಧಿಕಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಇಲ್ಲಿನ ನಾಗರಿಕರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುದೂರು</strong>: ಪಟ್ಟಣ ಸೇರಿದಂತೆ ಹೋಬಳಿಯಾದ್ಯಂತ ಶನಿವಾರ ಸಂಜೆ ಧಾರಾಕಾರವಾಗಿ ಮಳೆ ಸುರಿಯಿತು.</p>.<p>ಸಂಜೆ 4:30ರ ಸುಮಾರಿಗೆ ಸಣ್ಣದಾಗಿ ಹನಿ ತೊಡಗಿದ ಮಳೆ ನಂತರ ಜೋರಾಗಿ ಒಂದೂವರೆ ಗಂಟೆ ಸುರಿಯಿತು.</p>.<p>ಪಟ್ಟಣದ ಸಂತೆ ಸರ್ಕಲ್ ಬಳಿ ಮಳೆ ನೀರು ಸರಾಗವಾಗಿ ಹರಿಯದ ಕಾರಣ ಗುಂಡಿಗಳಲ್ಲಿ ನೀರು ತುಂಬಿ ವಾಹನ ಸವಾರರು ತೊಂದರೆ ಅನುಭವಿಸಿದರು.</p>.<p>ಕೆಲ ದಿನಗಳ ಬಿಡುವಿನ ಬಳಿಕ ಸುರಿದ ಮಳೆಗೆ ರೈತಾಪಿ ವರ್ಗ ಸಂತಸ ಪಟ್ಟಿತು. ಮುಂಗಾರು ಕೃಷಿ ಚಟುವಟಿಕೆಗಳಿಗೆ ಮಳೆ ಪೂರಕವಾಗಿದೆ. ಕೃಷಿ ಚಟುವಟಿಕೆಗಳನ್ನು ಆರಂಭಿಸಲು ಅನುಕೂಲವಾಗಿದೆ ಎಂದು ರೈತ ಬೀಚನಹಳ್ಳಿ ನರಸಿಂಹಮೂರ್ತಿ ತಿಳಿಸಿದರು.</p>.<p><strong>ಎಚ್ಚೆತ್ತುಕೊಳ್ಳದ</strong> <strong>ಪಂಚಾಯಿತಿ</strong>: ಮಳೆಗಾಲ ಶುರುವಾದರೂ ಪಟ್ಟಣದ ಕೆಲ ಚರಂಡಿ ಹಾಗೂ ರಾಜಕಾಲುವೆ ಹೂಳು ಸ್ವಚ್ಛಗೊಳಿಸಿಲ್ಲ. ಈ ಕುರಿತು ‘ಪ್ರಜಾವಾಣಿ’ಯಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು. ಈ ಕುರಿತು ಜಿಲ್ಲಾಧಿಕಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಇಲ್ಲಿನ ನಾಗರಿಕರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>