<p><strong>ದೇವನಹಳ್ಳಿ</strong>: ತಾಲ್ಲೂಕಿನಾದ್ಯಂತ ಭಾನುವಾರ ರಾತ್ರಿ ಮತ್ತು ಸೋಮವಾರ ಸುರಿದ ಭಾರಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಎಲ್ಲೆಡೆ ಮಳೆ ನೀರು ತುಂಬಿಕೊಂಡಿದೆ.</p>.<p>ಸೋಮವಾರ ಬೆಳಗಿನ ಜಾವ ಸುರಿದ ಮಳೆಯಿಂದ ತಾಲ್ಲೂಕಿನ ಸಾಕಷ್ಟು ತೋಟಗಳಿಗೆ ನೀರು ನುಗ್ಗಿದ್ದು, ಫಸಲಿಗೆ ಬಂದ ಹೂವು, ತರಕಾರಿ ಸೇರಿ ವಿವಿಧ ಬೆಳೆಗಳು ನಷ್ಟ ಆಗಿವೆ.</p>.<p>ಕಚ್ಚಾ ಮನೆಯಲ್ಲಿರುವ ಬಡವರು, ನಿರ್ಗತಿಕರು ರಾತ್ರಿ ಇಡೀ ಬಿದ್ದ ಮಳೆಯಿಂದ ರಕ್ಷಣೆ ಪಡೆಯಲು ಅಲೆದಾಟ ನಡೆಸಿದರು. </p>.<p>ಪಟ್ಟಣದ ಬಿಬಿ ರಸ್ತೆಯಲ್ಲಿ ಸಿಸಿ ರಸ್ತೆ ಕಾಮಗಾರಿಯಿಂದ ದೇವನಹಳ್ಳಿ ಹಳೇ ಪಟ್ಟಣದ ಸಂಪರ್ಕ ಕೊಂಡಿ ಬಂದ್ ಮಾಡಿದಂತಾಗಿದೆ. ಇಲ್ಲಿ ಮಳೆ ನೀರು ಸಂಗ್ರಹವಾಗಿ ಜನರು ಓಡಾಡಲು ಸಾಧ್ಯವಾಗುತ್ತಿಲ್ಲ.</p>.<p>ತಾಲ್ಲೂಕು ಕಚೇರಿ ಕಟ್ಟಡದ ನೆಲ ಮಹಡಿಯಲ್ಲಿ ಮಳೆ ನೀರು ಸಂಗ್ರಹವಾಗಿದೆ. ಪಡಸಾಲೆ ಕಚೇರಿಯಲ್ಲಿ ವಿವಿಧ ಪ್ರಮಾಣ ಪತ್ರಗಳು, ಆಧಾರ್ ನೋಂದಣಿ, ಸಕಾಲ ಅರ್ಜಿ ಸಲ್ಲಿಸಲು ಮಳೆ ನೀರಿನಲ್ಲಿಯೇ ಜನರು ನಿಂತು, ಸರ್ಕಾರಿ ಸೇವೆ ಪಡೆಯಲು ತೊಂದರೆ ಅನುಭವಿಸಿದರು.</p>.<p>ಬೇಸಿಗೆ ಕಾಲದಲ್ಲಿ ಸ್ಥಳೀಯ ಸಂಸ್ಥೆಗಳು ಮಳೆ ನೀರು ಹರಿಯುವ ಚರಂಡಿ ಸ್ವಚ್ಛ ಮಾಡದ ಹಾಗೂ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಅನಧಿಕೃತ ಕಟ್ಟಡ ನಿರ್ಮಾಣ ಮಾಡಿರುವ ಪರಿಣಾಮ ಮಳೆ ನೀರು ಇಳಿಜಾರಿನ ಪ್ರದೇಶದಲ್ಲಿ ರಸ್ತೆಯಲ್ಲಿ ಸಂಗ್ರಹವಾಗಿ ಕೆರೆಯಂತಾಗಿದೆ.</p>.<p>ಸೋಮವಾರ ಬೆಳಿಗ್ಗೆ ದಿನಪತ್ರಿಕೆ ವಿತರಣೆ ಮಾಡಲು ಆಗಮಿಸಿದ್ದ, ಪತ್ರಿಕಾ ವಿತರಕರು ಮಳೆಯಿಂದ ಪತ್ರಿಕೆಗಳನ್ನು ಸರಿಯಾದ ಸಮಯಕ್ಕೆ ತಲುಪಿಸಲು ಕಷ್ಟಪಟ್ಟರು.</p>.<p>ಬೀದಿ ಬದಿಯಲ್ಲಿ ಹೂವಿನ ವ್ಯಾಪಾರ, ಹಣ್ಣು ವ್ಯಾಪಾರ ಮಾಡುವವರು, ಚಿಲ್ಲರೆ ಸಗಟು ವ್ಯಾಪಾರಗಾರರು ಮಳೆಯಿಂದ ವ್ಯಾಪಾರ ಇಲ್ಲದೇ ನಷ್ಟ ಅನುಭವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ತಾಲ್ಲೂಕಿನಾದ್ಯಂತ ಭಾನುವಾರ ರಾತ್ರಿ ಮತ್ತು ಸೋಮವಾರ ಸುರಿದ ಭಾರಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಎಲ್ಲೆಡೆ ಮಳೆ ನೀರು ತುಂಬಿಕೊಂಡಿದೆ.</p>.<p>ಸೋಮವಾರ ಬೆಳಗಿನ ಜಾವ ಸುರಿದ ಮಳೆಯಿಂದ ತಾಲ್ಲೂಕಿನ ಸಾಕಷ್ಟು ತೋಟಗಳಿಗೆ ನೀರು ನುಗ್ಗಿದ್ದು, ಫಸಲಿಗೆ ಬಂದ ಹೂವು, ತರಕಾರಿ ಸೇರಿ ವಿವಿಧ ಬೆಳೆಗಳು ನಷ್ಟ ಆಗಿವೆ.</p>.<p>ಕಚ್ಚಾ ಮನೆಯಲ್ಲಿರುವ ಬಡವರು, ನಿರ್ಗತಿಕರು ರಾತ್ರಿ ಇಡೀ ಬಿದ್ದ ಮಳೆಯಿಂದ ರಕ್ಷಣೆ ಪಡೆಯಲು ಅಲೆದಾಟ ನಡೆಸಿದರು. </p>.<p>ಪಟ್ಟಣದ ಬಿಬಿ ರಸ್ತೆಯಲ್ಲಿ ಸಿಸಿ ರಸ್ತೆ ಕಾಮಗಾರಿಯಿಂದ ದೇವನಹಳ್ಳಿ ಹಳೇ ಪಟ್ಟಣದ ಸಂಪರ್ಕ ಕೊಂಡಿ ಬಂದ್ ಮಾಡಿದಂತಾಗಿದೆ. ಇಲ್ಲಿ ಮಳೆ ನೀರು ಸಂಗ್ರಹವಾಗಿ ಜನರು ಓಡಾಡಲು ಸಾಧ್ಯವಾಗುತ್ತಿಲ್ಲ.</p>.<p>ತಾಲ್ಲೂಕು ಕಚೇರಿ ಕಟ್ಟಡದ ನೆಲ ಮಹಡಿಯಲ್ಲಿ ಮಳೆ ನೀರು ಸಂಗ್ರಹವಾಗಿದೆ. ಪಡಸಾಲೆ ಕಚೇರಿಯಲ್ಲಿ ವಿವಿಧ ಪ್ರಮಾಣ ಪತ್ರಗಳು, ಆಧಾರ್ ನೋಂದಣಿ, ಸಕಾಲ ಅರ್ಜಿ ಸಲ್ಲಿಸಲು ಮಳೆ ನೀರಿನಲ್ಲಿಯೇ ಜನರು ನಿಂತು, ಸರ್ಕಾರಿ ಸೇವೆ ಪಡೆಯಲು ತೊಂದರೆ ಅನುಭವಿಸಿದರು.</p>.<p>ಬೇಸಿಗೆ ಕಾಲದಲ್ಲಿ ಸ್ಥಳೀಯ ಸಂಸ್ಥೆಗಳು ಮಳೆ ನೀರು ಹರಿಯುವ ಚರಂಡಿ ಸ್ವಚ್ಛ ಮಾಡದ ಹಾಗೂ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಅನಧಿಕೃತ ಕಟ್ಟಡ ನಿರ್ಮಾಣ ಮಾಡಿರುವ ಪರಿಣಾಮ ಮಳೆ ನೀರು ಇಳಿಜಾರಿನ ಪ್ರದೇಶದಲ್ಲಿ ರಸ್ತೆಯಲ್ಲಿ ಸಂಗ್ರಹವಾಗಿ ಕೆರೆಯಂತಾಗಿದೆ.</p>.<p>ಸೋಮವಾರ ಬೆಳಿಗ್ಗೆ ದಿನಪತ್ರಿಕೆ ವಿತರಣೆ ಮಾಡಲು ಆಗಮಿಸಿದ್ದ, ಪತ್ರಿಕಾ ವಿತರಕರು ಮಳೆಯಿಂದ ಪತ್ರಿಕೆಗಳನ್ನು ಸರಿಯಾದ ಸಮಯಕ್ಕೆ ತಲುಪಿಸಲು ಕಷ್ಟಪಟ್ಟರು.</p>.<p>ಬೀದಿ ಬದಿಯಲ್ಲಿ ಹೂವಿನ ವ್ಯಾಪಾರ, ಹಣ್ಣು ವ್ಯಾಪಾರ ಮಾಡುವವರು, ಚಿಲ್ಲರೆ ಸಗಟು ವ್ಯಾಪಾರಗಾರರು ಮಳೆಯಿಂದ ವ್ಯಾಪಾರ ಇಲ್ಲದೇ ನಷ್ಟ ಅನುಭವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>