ಶಾಲೆಯ ಮುಖ್ಯಸ್ಥ ರಾಮಕೃಷ್ಣಪ್ಪ ಮಾತನಾಡಿ, ‘ನಗರ ಪ್ರದೇಶಗಳಿಗೆ ಹೋಲಿಸಿದರೆ, ಗ್ರಾಮಾಂತರ ಪ್ರದೇಶಗಳಲ್ಲಿನ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ನಗರ ಪ್ರದೇಶಗಳ ಮಕ್ಕಳಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಉತ್ತಮ ಫಲಿತಾಂಶವನ್ನೂ ನೀಡಿದ್ದೇವೆ. ಆದರೆ, ಎಲ್ಲಾ ಸೌಲಭ್ಯಗಳಿಗೂ ಸರ್ಕಾರದ ಮೇಲೆ ಅವಲಂಬಿತರಾದರೆ ಮುಂದಿನ ದಿನಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕಾಪಾಡುವುದು ಕಷ್ಟವಾಗುತ್ತದೆ. ಆದ್ದರಿಂದ ಸಮುದಾಯ ಶೈಕ್ಷಣಿಕ ಕ್ಷೇತ್ರದ ಕಡೆಗೆ ಹೆಚ್ಚು ಗಮನಹರಿಸುವುದು ಅನಿವಾರ್ಯವಾಗುತ್ತದೆ ಎಂದರು.