ದೇಗುಲ ಇಒಗೆ ಆದೇಶ ಪ್ರತಿ ಸಲ್ಲಿಕೆ: ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ನ್ಯಾಯಾಲಯದ ಆದೇಶ ಪ್ರತಿಯನ್ನು ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಅವರಿಗೆ ತಡೆಯಾಜ್ಞೆ ಆದೇಶ ಪ್ರತಿ ಸಲ್ಲಿಸಿದ ಗ್ರಾಮದ ಮುಖಂಡ ಜಗನ್ನಾಥ್ ಮಾತನಾಡಿ, ವ್ಯವಸ್ಥಾಪನಾ ಸಮಿತಿಯಲ್ಲಿ 9 ಜನ ಸದಸ್ಯರು ಇರಬೇಕು. ಇದರಲ್ಲಿ ಇಬ್ಬರು ಮಹಿಳೆಯರಿಗೆ ಮೀಸಲಾತಿ ಕೊಡಬೇಕಿತ್ತು. ಆದರೆ ರಾಜ್ಯ ಧಾರ್ಮಿಕ ಪರಿಷತ್ ಅಭಿಪ್ರಾಯವನ್ನೂ ಪಡೆಯದೇ ಏಕಾಏಕಿ ಆಯುಕ್ತರು ತೀರ್ಮಾನ ಕೈಗೊಂಡಿದ್ದರು. ಈ ದಿಸೆಯಲ್ಲಿ ಮೇಲಿನಜೂಗಾನಹಳ್ಳಿಯ ಇ.ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಫೆ.21 ರಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾದ ರೋಹಿಣಿ ಸಿಂಧೂರಿ ಹೊರಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ ಎಂದು ತಿಳಿಸಿದರು. ಜೆಡಿಎಸ್ ಮುಖಂಡ ಗೌರೀಶ್,ತೂಬಗೆರೆ ಗ್ರಾ.ಪಂ. ಸದಸ್ಯ ಮಧು, ಮುಖಂಡರಾದ ಮಂಜುನಾಥ್ ಇದ್ದರು.