ಕೆರೆಗೆ ಕಲುಷಿತ ನೀರು ಹರಿಯುವುದನ್ನು ತಡೆಯಲು ಒತ್ತಾಯಿಸಿ ಮುತ್ತಾನಲ್ಲೂರು ಕೆರೆ ವ್ಯಾಪ್ತಿಯ ವಿವಿಧ ಗ್ರಾಮಗಳಿಂದ ಸಾರ್ವಜನಿಕರು ನಮ್ಮ ಕೆರೆ; ನಮ್ಮ ಹಕ್ಕು ಎಂಬ ಘೋಷವಾಕ್ಯ
ದೊಂದಿಗೆ ಚಂದಾಪುರ ಪುರ
ಸಭೆ, ಪರಿಸರ ಮಾಲಿನ್ಯ
ನಿಯಂತ್ರಣ ಮಂಡಳಿ, ಬೊಮ್ಮಸಂದ್ರದ ಸ್ಪರ್ಶ ಆಸ್ಪತ್ರೆ, ನಾರಾಯಣ ಹೃದಯಾಲಯ, ಬೊಮ್ಮಸಂದ್ರ ಕೈಗಾರಿಕಾ ಸಂಘದವರೆಗೂ ಪಾದಯಾತ್ರೆ ನಡೆಸಲಿದ್ದಾರೆ. ಕಲುಷಿತ ನೀರನ್ನು ಕೆರೆಗೆ ಬಿಡಬಾರದು ಎಂದು ಒತ್ತಾಯಿಸಿ ಮನವಿ ಸಲ್ಲಿಸಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.