ಇಲ್ಲಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಕಾಲಕ್ಕೆ ಸರಿಯಾಗಿ ಮಳೆಯಾಗದೆ ಬಯಲುಸೀಮೆ ಭಾಗದಲ್ಲಿನ ಯಾವುದೇ ಕೆರೆ, ಕುಂಟೆಗಳಲ್ಲಿ ಒಂದು ಹನಿ ನೀರಿಲ್ಲದ ಕಾರಣ ಈ ಭಾಗದಲ್ಲಿನ ಅಂತರ್ಜಲದ ಮಟ್ಟ 1,800 ಅಡಿಗಳಿಗೆ ಕುಸಿದಿದೆ. ಕೃಷಿಯನ್ನೇ ಪ್ರಧಾನ ಕಸುಬನ್ನಾಗಿಸಿಕೊಂಡು ಬದುಕುತ್ತಿರುವ ರೈತರು, ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂದರು.