ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ.ಸುಧಾಕರ್ ಮಾತನಾಡಿ, ‘ಸಾಹಿತ್ಯ ಪರಿಷತ್ತು ನಾಡಿನ ಜ್ವಲಂತ ಸಮಸ್ಯೆಗಳ ನಿವಾರಣೆಗಾಗಿಯೂ ಶ್ರಮಿಸಲಾಗುತ್ತಿದೆ. ಈಗಾಗಲೇ ನಮ್ಮ ಭಾಗದಲ್ಲಿನ ಎಲ್ಲಾ ಸಾಹಿತಿಗಳು, ಕವಿಗಳು, ಯುವ ಕವಿಗಳು, ಸಾಹಿತ್ಯ ಪ್ರೇಮಿಗಳನ್ನು ಗುರುತಿಸಿ ಪ್ರೋತ್ಸಾಹ ಮಾಡುವ ಕೆಲಸ ಮಾಡಲಾಗುತ್ತಿದೆ.ಎಚ್.ನರಸಿಂಹಯ್ಯ ಅವರಿಗೆ ವಿಜ್ಞಾನದಲ್ಲಿ, ವೈಜ್ಞಾನಿಕ ಮನೋಭಾವದಲ್ಲಿ ಅಚಲವಾದ ನಂಬಿಕೆ. ಮೂಢನಂಬಿಕೆ, ಮೌಢ್ಯದ ವಿರುದ್ಧ ಸತತ ಹೋರಾಟ ನಡೆಸಿದವರು. ಲಲಿತ ಕಲೆಗಳಿಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡಿದ್ದರು. ಅಧ್ಯಾಪಕ, ಆಡಳಿತಗಾರ, ಸ್ನೇಹಮಯ ಮಾನವತಾವಾದಿ, ವಿಚಾರವಾದಿ, ಮೇಲ್ಮಟ್ಟದ ಹಾಸ್ಯ ಪ್ರಜ್ಞೆ ಅವರದು ಇಂತಹ ಮಹನೀಯರನ್ನು ಆದರ್ಶವಾಗಿ ಪಡೆಯಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ’ ಎಂದರು.