<p><strong>ಆನೇಕಲ್: </strong>ಬೆಂಗಳೂರು ನಗರ ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ನಿಯಮಿತ (ಹಾಪ್ಕಾಮ್ಸ್)ದ ನಿರ್ದೇಶಕರ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಆನೇಕಲ್ ತಾಲ್ಲೂಕಿನ ಮೂವರು ಆಯ್ಕೆಯಾಗಿದ್ದಾರೆ. </p>.<p>ಆನೇಕಲ್ ತಾಲ್ಲೂಕಿನ ಎನ್. ದೇವರಾಜು, ಮೇಘ. ಆರ್. ತಿಲಕ್ ಕುಮಾರ್, ಎಚ್.ಕೆ.ನಾಗವೇಣಿ ಅವರು ಚುನಾಯಿತರಾಗಿದ್ದಾರೆ. ದೇವರಾಜು ಅವರು 93 ಮತಗಳು, ಮೇಘ.ಆರ್.ತಿಲಕ್ ಕುಮಾರ್ 98 ಮತ್ತು ನಾಗವೇಣಿ ಅವರು 101 ಮತಗಳನ್ನು ಪಡೆದು ಹಾಪ್ಕಾಮ್ಸ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.</p>.<p>ಹಾಪ್ಕಾಮ್ಸ್ ನಿರ್ದೇಶಕಿ ಮೇಘ.ಆರ್.ತಿಲಕ್ ಕುಮಾರ್ ಮಾತನಾಡಿ, ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಮೂವರು ಆಯ್ಕೆಯಾಗಿದ್ದಾರೆ. ಹಾಪ್ಕಾಮ್ಸ್ನಲ್ಲಿ ರೈತಸ್ನೇಹಿ ಆಡಳಿತ ಮಂಡಳಿ ಸ್ಥಾಪಿಸಬೇಕು ಎಂಬುದು ನಮ್ಮ ಗುರಿ. ಹಾಪ್ಕಾಮ್ಸ್ ಮಳಿಗೆಗಳನ್ನು ಹೆಚ್ಚಿಸುವುದು ಸೇರಿದಂತೆ ಹಾಪ್ಕಾಮ್ಸ್ ಮೂಲಕ ರೈತಸ್ನೇಹಿ ಆಡಳಿತ ನೀಡಲಾಗುವುದು ಎಂದರು.</p>.<p>ಆನೇಕಲ್ ತಾಲ್ಲೂಕಿನಿಂದ ಮೂವರು ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.</p>.<p>ಈ ವೇಳೆ ಬಿಜೆಪಿ ಆನೇಕಲ್ ಅಧ್ಯಕ್ಷ ಎಸ್.ಆರ್.ಟಿ.ಅಶೋಕ್ ರೆಡ್ಡಿ, ದೊಡ್ಡಹಾಗಡೆ ಶಂಕರ್, ಜೆ.ನಾರಾಯಣಪ್ಪ, ಜಯಪ್ರಕಾಶ್, ಮಣಿಕಂಠ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಬೆಂಗಳೂರು ನಗರ ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ ನಿಯಮಿತ (ಹಾಪ್ಕಾಮ್ಸ್)ದ ನಿರ್ದೇಶಕರ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಆನೇಕಲ್ ತಾಲ್ಲೂಕಿನ ಮೂವರು ಆಯ್ಕೆಯಾಗಿದ್ದಾರೆ. </p>.<p>ಆನೇಕಲ್ ತಾಲ್ಲೂಕಿನ ಎನ್. ದೇವರಾಜು, ಮೇಘ. ಆರ್. ತಿಲಕ್ ಕುಮಾರ್, ಎಚ್.ಕೆ.ನಾಗವೇಣಿ ಅವರು ಚುನಾಯಿತರಾಗಿದ್ದಾರೆ. ದೇವರಾಜು ಅವರು 93 ಮತಗಳು, ಮೇಘ.ಆರ್.ತಿಲಕ್ ಕುಮಾರ್ 98 ಮತ್ತು ನಾಗವೇಣಿ ಅವರು 101 ಮತಗಳನ್ನು ಪಡೆದು ಹಾಪ್ಕಾಮ್ಸ್ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.</p>.<p>ಹಾಪ್ಕಾಮ್ಸ್ ನಿರ್ದೇಶಕಿ ಮೇಘ.ಆರ್.ತಿಲಕ್ ಕುಮಾರ್ ಮಾತನಾಡಿ, ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಮೂವರು ಆಯ್ಕೆಯಾಗಿದ್ದಾರೆ. ಹಾಪ್ಕಾಮ್ಸ್ನಲ್ಲಿ ರೈತಸ್ನೇಹಿ ಆಡಳಿತ ಮಂಡಳಿ ಸ್ಥಾಪಿಸಬೇಕು ಎಂಬುದು ನಮ್ಮ ಗುರಿ. ಹಾಪ್ಕಾಮ್ಸ್ ಮಳಿಗೆಗಳನ್ನು ಹೆಚ್ಚಿಸುವುದು ಸೇರಿದಂತೆ ಹಾಪ್ಕಾಮ್ಸ್ ಮೂಲಕ ರೈತಸ್ನೇಹಿ ಆಡಳಿತ ನೀಡಲಾಗುವುದು ಎಂದರು.</p>.<p>ಆನೇಕಲ್ ತಾಲ್ಲೂಕಿನಿಂದ ಮೂವರು ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.</p>.<p>ಈ ವೇಳೆ ಬಿಜೆಪಿ ಆನೇಕಲ್ ಅಧ್ಯಕ್ಷ ಎಸ್.ಆರ್.ಟಿ.ಅಶೋಕ್ ರೆಡ್ಡಿ, ದೊಡ್ಡಹಾಗಡೆ ಶಂಕರ್, ಜೆ.ನಾರಾಯಣಪ್ಪ, ಜಯಪ್ರಕಾಶ್, ಮಣಿಕಂಠ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>