<p><strong>ಆನೇಕಲ್: </strong>ಬೆಂಗಳೂರಿನ ಲಾಲ್ಬಾಗ್ ಬಳಿಯ ತೋಟದ ಬೆಳೆಗಾರರ ಸಹಕಾರ ಮತ್ತು ಸಂಸ್ಕರಣ ಸಂಘದಲ್ಲಿ (ಹಾಪ್ಕಾಮ್ಸ್) ನಡೆದಿರುವ ಅವ್ಯವಹಾರ ಮತ್ತು ನಿಯಮಬಾಹಿರ ಸದಸ್ಯರ ಸೇರ್ಪಡೆಗೆ ಸಂಬಂಧಿಸಿದಂತೆ ಹಾಪ್ಕಾಮ್ಸ್ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ 10 ನಿರ್ದೇಶಕರನ್ನು ಅನರ್ಹಗೊಳಿಸಲಾಗಿದೆ. </p>.<p>ಹಾಪ್ಕಾಮ್ಸ್ ಅಧ್ಯಕ್ಷೆ ಎಚ್.ಕೆ.ನಾಗವೇಣಿ, ಉಪಾಧ್ಯಕ್ಷ ಎ.ಎಸ್.ಚಂದ್ರೇಗೌಡ, ನಿರ್ದೇಶಕರಾದ ಎನ್.ದೇವರಾಜು, ವಸಂತಕುಮಾರ್, ಸೊಣ್ಣಪ್ಪ, ಪ್ರಕಾಶ್, ಸಂಪಂಗಿರಾಮಯ್ಯ, ಗೋಪಾಲಕೃಷ್ಣ ಬಿ., ಮುನೇಗೌಡ ಅವರನ್ನು ಅನರ್ಹಗೊಳಿಸಿ ಸಹಕಾರ ಸಂಘಗಳ ಜಂಟಿ ನಿಬಂಧಕ ಅಶ್ವತ್ಥನಾರಾಯಣ ಆದೇಶ ಹೊರಡಿಸಿದ್ದಾರೆ.</p>.<p>ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಕಲಂ 29ಸಿ(8)(ಬಿ)(ಸಿ) ಮತ್ತು (ಡಿ) ಅನ್ವಯ ಅನರ್ಹಗೊಳಿಸಲಾಗಿದೆ. ಮುಂದಿನ ಐದು ವರ್ಷ ಯಾವುದೇ ಸಹಕಾರ ಸಂಘದ ನಿರ್ದೇಶಕರಾಗದಂತೆ ಅನರ್ಹಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ನಿಯಮ ಬಾಹಿರವಾಗಿ ಹೊಸ ಸದಸ್ಯರನ್ನು ಸೇರಿಸಿರುವುದು, ಸದಸ್ಯತ್ವ ಅರ್ಜಿಯ ಜೊತೆಗೆ ನೀಡಬೇಕಾದ ಪಹಣಿ ಮತ್ತು ಇತರೆ ದಾಖಲೆಗಳನ್ನು ಪಡೆಯದಿರುವ ಆರೋಪ ಮೇಲೆ ಈ ಕ್ರಮ ಜರುಗಿಸಲಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಬೆಂಗಳೂರಿನ ಲಾಲ್ಬಾಗ್ ಬಳಿಯ ತೋಟದ ಬೆಳೆಗಾರರ ಸಹಕಾರ ಮತ್ತು ಸಂಸ್ಕರಣ ಸಂಘದಲ್ಲಿ (ಹಾಪ್ಕಾಮ್ಸ್) ನಡೆದಿರುವ ಅವ್ಯವಹಾರ ಮತ್ತು ನಿಯಮಬಾಹಿರ ಸದಸ್ಯರ ಸೇರ್ಪಡೆಗೆ ಸಂಬಂಧಿಸಿದಂತೆ ಹಾಪ್ಕಾಮ್ಸ್ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ 10 ನಿರ್ದೇಶಕರನ್ನು ಅನರ್ಹಗೊಳಿಸಲಾಗಿದೆ. </p>.<p>ಹಾಪ್ಕಾಮ್ಸ್ ಅಧ್ಯಕ್ಷೆ ಎಚ್.ಕೆ.ನಾಗವೇಣಿ, ಉಪಾಧ್ಯಕ್ಷ ಎ.ಎಸ್.ಚಂದ್ರೇಗೌಡ, ನಿರ್ದೇಶಕರಾದ ಎನ್.ದೇವರಾಜು, ವಸಂತಕುಮಾರ್, ಸೊಣ್ಣಪ್ಪ, ಪ್ರಕಾಶ್, ಸಂಪಂಗಿರಾಮಯ್ಯ, ಗೋಪಾಲಕೃಷ್ಣ ಬಿ., ಮುನೇಗೌಡ ಅವರನ್ನು ಅನರ್ಹಗೊಳಿಸಿ ಸಹಕಾರ ಸಂಘಗಳ ಜಂಟಿ ನಿಬಂಧಕ ಅಶ್ವತ್ಥನಾರಾಯಣ ಆದೇಶ ಹೊರಡಿಸಿದ್ದಾರೆ.</p>.<p>ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಕಲಂ 29ಸಿ(8)(ಬಿ)(ಸಿ) ಮತ್ತು (ಡಿ) ಅನ್ವಯ ಅನರ್ಹಗೊಳಿಸಲಾಗಿದೆ. ಮುಂದಿನ ಐದು ವರ್ಷ ಯಾವುದೇ ಸಹಕಾರ ಸಂಘದ ನಿರ್ದೇಶಕರಾಗದಂತೆ ಅನರ್ಹಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ನಿಯಮ ಬಾಹಿರವಾಗಿ ಹೊಸ ಸದಸ್ಯರನ್ನು ಸೇರಿಸಿರುವುದು, ಸದಸ್ಯತ್ವ ಅರ್ಜಿಯ ಜೊತೆಗೆ ನೀಡಬೇಕಾದ ಪಹಣಿ ಮತ್ತು ಇತರೆ ದಾಖಲೆಗಳನ್ನು ಪಡೆಯದಿರುವ ಆರೋಪ ಮೇಲೆ ಈ ಕ್ರಮ ಜರುಗಿಸಲಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>