ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಆಸ್ಪತ್ರೆಯಲ್ಲಿ ಶೋಧ ಕಾರ್ಯ ನಡೆದಿದೆ. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್, ಭ್ರೂಣ ಪತ್ತೆಯಾಗಿರುವ ಆಸ್ಪತ್ರೆಯನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತವಾಗಿ ಭ್ರೂಣ ಪತ್ತೆ ತನಿಖೆ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಎಸ್.ಪಿ.ಜೆ ಆಸ್ಪತ್ರೆಯಲ್ಲಿ ಭ್ರೂಣ ಪತ್ತೆಯಾಗಿದೆ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಡಿಎಚ್ಒ ತಿಳಿಸಿದ್ದಾರೆ.